ಮಧುರೈ :
ಬೆಂಕಿ ನಂದಿಸುವ ವೇಳೆ ಕಟ್ಟಡ ಕುಸಿದು ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮಧುರೈನಲ್ಲಿ ಹಳೆಯ ಕಟ್ಟಡವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗೆ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದೆ ಎಂದು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾತನಾಡಿದ ತಮಿಳುನಾಡು ಪೊಲೀಸರು ಶಾರ್ಟ್ ಸರ್ಕ್ಯೂಟ್ನಿಂದಾಗಿ ಹಳೆಯ ಕಟ್ಟಡದಲ್ಲಿ ಬೆಂಕಿ ತಗುಲಿದ್ದು ಮಾತ್ರವಲ್ಲ ಕಟ್ಟಡ ಕುಸಿದು ಬಿದ್ದಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ದುರಂತದಲ್ಲಿ ಕೆಲ ಸಿಬ್ಬಂದಿಗೆ ಗಾಯಗಳಾಗಿವೆ ಅಂತಾ ಖಾಸಗಿ ಮಾಧ್ಯಮ ವರದಿ ಮಾಡಿದೆ.
ರಕ್ಷಣಾ ಸಿಬ್ಬಂದಿ ನಿಧನಕ್ಕೆ ಸಂತಾಪ ಸೂಚಿಸಿರುವ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ, ಕೆ. ಶಿವರಾಜನ್ ಹಾಗೂ ಪಿ. ಕೃಷ್ಣಮೂರ್ತಿ ಕುಟುಂಬಕ್ಕೆ 25ಲಕ್ಷ ರೂಪಾಯಿ ಪರಿಹಾರ ಧನ ಘೋಷಣೆ ಮಾಡಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಪರಿಹಾರದ ಜೊತೆಗೆ ಕುಟುಂಬದ ಒಬ್ಬ ಸದಸ್ಯನಿಗೆ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲಾಗುವುದು ಅಂತಾ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/11/Fire.jpg)