ಸಿಎಂ ಕಚ್ಚಾಟ ಬಿಟ್ಟು ಪಕ್ಷ ಅಧಿಕಾರಕ್ಕೆ ತನ್ನಿ : ಖರ್ಗೆ

ಕೋಲಾರ: 

      ಮುಖ್ಯಮಂತ್ರಿ ಹುದ್ದೆಗಾಗಿ ಗಲಾಟೆ ಮಾಡುವುದನ್ನು ಮೊದಲು ನಿಲ್ಲಿಸಿ. ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ. ಆ ಪಟ್ಟ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅಷ್ಟೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದ್ದಾರೆ.

      ಇಂದು ಕೋಲಾರದಲ್ಲಿ ನಡೆದ ಕಾಂಗ್ರೆಸ್ ನ ‘ಜೈ ಭಾರತ’ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಸಿಎಂ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link