ಬೆಂಗಳೂರು:
ಕಾಂಗ್ರೆಸ್, ಜೆಡಿಎಸ್ಗೆ ಈ ಹಿಂದೆ ಅಧಿಕಾರ ಕೊಟ್ಟಿದ್ದೀರಿ. ಕಾಂಗ್ರೆಸ್, ಜೆಡಿಎಸ್ಗೆ ಸ್ಥಿರ ಸರಕಾರ ಮಾಡುವ ಯೋಗ್ಯತೆ ಇಲ್ಲ. ಸ್ಥಿರ ಮತ್ತು ಅಭಿವೃದ್ಧಿಪರ ಸರಕಾರಕ್ಕಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದರು.
ಬನ್ನೇರುಘಟ್ಟದಲ್ಲಿ ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗೆ ಶಾಸಕರು ಶ್ರಮಿಸಿದ್ದಾರೆ. ರಾಜ್ಯ ಮತ್ತು ರಾಷ್ಟçದ ಅಭಿವೃದ್ಧಿ ಕಾರ್ಯದಲ್ಲಿ ಬಿಜೆಪಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ತಿಳಿಸಿದರು. ಕೋವಿಡ್ ವೇಳೆ ಕಾಂಗ್ರೆಸ್ಸಿಗರು, ಜೆಡಿಎಸ್ನವರು ಮನೆ ಒಳಗೇ ಇದ್ದರು. ಬಿಜೆಪಿ ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ತೊಡಗಿದರು. ಅನಾಥ ಶವಸಂಸ್ಕಾರಕ್ಕೆ ನಾವು ನಮ್ಮನ್ನು ತೊಡಗಿಸಿಕೊಂಡೆವು ಎಂದು ತಿಳಿಸಿದರು. ಬಿಜೆಪಿ ಜನೋಪಯೋಗಿ, ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತ್ತೆ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಪ್ರಪಂಚದ ವಿವಿಧೆಡೆ ಕೋವಿಡ್ ಸಾಂಕ್ರಾಮಿಕದಿAದ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಇಂದಿಗೂ ಚೀನಾದಲ್ಲಿ ಸಾವಿರಾರು ಜನರು ಸಾಯುತ್ತಿದ್ದಾರೆ. ನಾವು ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ಕೊಟ್ಟಿದ್ದೇವೆ. ಜೀವ ರಕ್ಷಣೆ ಮಾಡಿದ್ದೇವೆ; ಇದಕ್ಕೆ ನರೇಂದ್ರ ಮೋದಿಜಿ ಕಾರಣರು, ಮೋದಿಜಿ ಅವರ ದೂರದೃಷ್ಟಿ ನಮ್ಮನ್ನೆಲ್ಲ ಉಳಿಸಿದೆ. ಕರ್ನಾಟಕದ ಆರೋಗ್ಯ ವ್ಯವಸ್ಥೆ ಮಾದರಿ ಆಗುವಂತೆ ಮಾಡಿದ್ದೇವೆ. ಕಾಂಗ್ರೆಸ್- ಜೆಡಿಎಸ್ ಅಣ್ಣ-ತಮ್ಮಂದಿರಂತೆ. ದೇವೇಗೌಡರನ್ನು ಪ್ರಧಾನಿ ಮಾಡಿದ್ದು ನಾವೇ; ಕುಮಾರಸ್ವಾಮಿಯವರನ್ನು ಸಿಎಂ ಮಾಡಿದ್ದು ನಾವೇ ಎಂದು ಡಿ.ಕೆ.ಶಿವಕುಮಾರ್ ಮೊನ್ನೆ ಹೇಳಿದ್ದಾರೆ ಎಂದು ನೆನಪಿಸಿದರು.ಶಾಸಕ ಎಂ.ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಗೋಪಿನಾಥ್, ಎನ್.ಆರ್.ರಮೇಶ್, ಸಚ್ಚಿದಾನಂದಮೂರ್ತಿ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/03/Untitled-3-6.jpg)