ರಾಮನಗರ:
ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಹನುಮಾನ್ ಚಾಲೀಸಾ ಪಠಣೆ ವಿವಾದಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ನಾಡು ಎಂದಿಗೂ ದ್ವೇಷ ಬಯಸುವುದಿಲ್ಲ.
ಈ ಸರ್ಕಾರದಿಂದ ಪದೇ ಪದೇ ಕೋಮು ಗಲಭೆಗೆ ಪ್ರಚೋದನೆ ನೀಡುವ ಪಿತೂರಿ ನಡೆಯುತ್ತಿದೆ. ಹೀಗಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮೇಲೆ ಕ್ರಮ ಕೈಗೊಳಬೇಕು ಎಂದು ಒತ್ತಾಯಿಸಿದರು.
ಶ್ರೀರಾಮ ಸೇನೆ ಹಾಗೂ ಬಿಜೆಪಿ ಅವರು ಅಣ್ಣ ತಮ್ಮಂದಿರು. ಅವರು ಏನು ಮಾಡುತ್ತಾರೋ ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಆಶಾಂತಿ ಮೂಡಿಸುವ ವಾತಾವರಣ ಸೃಷ್ಟಿಯಾಗುತ್ತಿದೆ.
ಈ ರಾಜ್ಯದಲ್ಲಿ ಎಲ್ಲಾ ಭಾಷೆಯ ವಾಸವಾಗಿದ್ದಾರೆ. ಆದರೆ ಈಗ ಚುನಾವಣಾ ದೃಷ್ಟಿಯಿಂದ ಅಶಾಂತಿ ಉಂಟು ಮಾಡುತ್ತಿದ್ದಾರೆ.
ತಕ್ಷಣವೇ ಸರ್ಕಾರ ಕ್ರಮ ವಹಿಸಬೇಕು. ಇಲ್ಲವಾದರೆ ರಾಜ್ಯಪಾಲರು ಆಡಳಿತ ನಡೆಸಬೇಕೆಂದು ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದರು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/05/Suresth.gif)