ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಗಾಲಿ ಜನಾರ್ದನ ರೆಡ್ಡಿ

ಬೆಂಗಳೂರು

    ಬಳ್ಳಾರಿ ಗಣಿಧಣಿ ಎಂದೇ ಖ್ಯಾತಿ ಪಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಬಾರಿಯ ಚುನಾವಣೆಗೆ ಪಕ್ಷದ ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.

ಗುರುವಾರ ಕೊಪ್ಪಳದಲ್ಲಿ ಜನಾರ್ದನ ರೆಡ್ಡಿ ಸಿರಗುಪ್ಪ, ಕನಕಗಿರಿ, ನಾಗಠಾಣ, ಸಿಂಧನೂರು, ಹಿರಿಯೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.
 “ಅವರು ಗೆಲ್ಲುತ್ತಾರೆ ಎಂಬ ನಂಬಿಕೆಯೊಂದಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದೇವೆ. ಸಮೀಕ್ಷೆ ಮಾಡಿಸಿ, ಗೆಲ್ಲುವ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದೇವೆ. ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ” ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap