ಬೆಳಗಾವಿ
ಮಹಾತ್ಮಾ ಗಾಂಧಿ ಅಧ್ಯಕ್ಷತೆಯ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪ್ರಯುಕ್ತ ಡಿಸೆಂಬರ್ 26 ಕ್ಕೆ ಗಾಂಧಿ ಪರವಾರ ಬೆಳಗಾವಿಗೆ ಬರಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. 26 ಹಾಗೂ 27ರಂದು ನಡೆಯಲಿರುವ ಅಧಿವೇಶನದ ಸಿದ್ಧತೆ ಬಗ್ಗೆ ಬೆಳಗಾವಿಯಲ್ಲಿ ಮಾಹಿತಿ ನೀಡಿದ ಅವರು, ಕಿತ್ತೂರು ಕರ್ನಾಟಕದ ಜನತೆ ಬೆಳಗಾವಿಗೆ ಬರಬೇಕು. ಶತಮಾನೋತ್ಸವ ಪ್ರಯುಕ್ತ ಮಾಡಿರುವ ಲೈಟಿಂಗ್ ಅಲಂಕಾರ ಬಂದು ನೋಡಬೇಕು ಎಂದರು.
ಈ ಹಿಂದೆ ಮಹಾತ್ಮಾ ಗಾಂಧಿ ಅಧ್ಯಕ್ಷರಾಗಿದ್ದ ಅಧಿವೇಶನದ ಎಲ್ಲಾ ಮಾಹಿತಿ ಸಂಗ್ರಹಿಸಿದ್ದೇವೆ. ಅಂತಹ ಇತಿಹಾಸ ಪುಟಕ್ಕೆ ಮತ್ತೆ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡಿದ್ದೇವೆ. ಜನರು ಇಲ್ಲಿಗೆ ಬರಬೇಕು. ಪಾರ್ಟಿ, ಪಕ್ಷ ಎಂದು ಯೋಚನೆ ಮಾಡಬೇಡಿ. ನಮ್ಮ ಪಕ್ಷ ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎಂಬುದನ್ನು ನಿರ್ಧಾರ ಮಾಡುತ್ತದೆ. ಪ್ರಜಾಪ್ರಭುತ್ವ ನಿಮಗೆ ಸಿಕ್ಕಿದೆ, ಲೀಡರ್ ಆಗಬೇಕು ಎಂದುಕೊಂಡಿರುವವರು ಬನ್ನಿ ಎಂದು ಡಿಕೆ ಶಿವಕುಮಾರ್ ಹೇಳಿದರು.
ಸಿದ್ಧತೆಗಳ ಬಗ್ಗೆ ಇಂದು ಅಂತಿಮ ಪರಿಶೀಲನೆ ಮಾಡುತ್ತೇನೆ. ಡಿಸೆಂಬರ್ 26 ರಿಂದ ಅಧಿಕೃತ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ಆರಂಭವಾಗಲಿದೆ. ಡಿಸೆಂಬರ್ 26 ರಂದು ಮಧ್ಯಾಹ್ನ 3 ಗಂಟೆ ಎಐಸಿಸಿ ಕಾರ್ಯಕಾರಣಿ ಸಮಿತಿ ಸಭೆ ನಡೆಯಲಿದೆ. 1924 ರ ಡಿಸೆಂಬರ್ 26 ರ ಮಧ್ಯಾಹ್ನ 3 ಗಂಟೆ ಮಹಾತ್ಮಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾರ್ಯಕಾರಣಿ ಸಭೆ ನಡೆದಿತ್ತು. ಅದೇ ಸಮಯದಲ್ಲಿ ಈಗಲೂ ಸಭೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
