ಗೋಕಾಕ್ :
ಚುನಾವಣಾ ಪ್ರಚಾರದಲ್ಲಿ ಸಂದರ್ಭದಲ್ಲಿ ಗೋಕಾಕ್ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಗೆ ಮತ ಹಾಕುವಂತೆ ಹೇಳಿ ಯಡವಟ್ಟು ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈತ್ರಿ ಸರ್ಕಾರದಲ್ಲಿ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿ ಗೋಕಾಕ್ ನಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾಋಎ. ಈ ವೇಳೆ ಗೋಕಾಕ್ ಕ್ಷೇತ್ರದ ಉಪಾರಟ್ಟಿ ಗ್ರಾಮದಲ್ಲಿ ಪ್ರಚಾರದ ವೇಳೆ ಕಾಂಗ್ರೆಸ್ ಗೆ ಮತ ಹಾಕುವಂತೆ ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಬಳಿಕ ನಕ್ಕು ಮೊದಲಿಂದಲೂ ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದವನು. ಹೀಗಾಗಿ ಪದೇ, ಪದೇ ಕಾಂಗ್ರೆಸ್ ಅಂತ ಬಾಯಿ ತಪ್ಪಿ ಬಂತು ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಗೋಕಾಕ್ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ನಿಂದ ಈಗಾಗಲೇ ಲಖನ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದು, ತೀವ್ರ ಕುತೂಹಲ ಕೆರಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/ramesh-Jarakiholi.gif)