GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು:

    ಜಿಎಸ್’ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

    ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್’ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ ಜಿಎಸ್’ಟಿ ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ ಎಂದು ಹೇಳಿದ್ದಾರೆ.

    ನ  .2025-26ರಲ್ಲಿ ಜಿಎಸ್’ಟಿ ಸಂಗ್ರಹದಲ್ಲಿ ಶೇ.2ರಷ್ಟು ಕುಸಿತ ದಾಖಲಾಗಿದೆ. ಕಳೆದ ವರ್ಷ ನವೆಂಬರ್ 2024ರಲ್ಲಿ ಜಿಎಸ್’ಟಿ ಶೇ.9.3 ಬೆಳವಣಿಗೆ ಆಗಿತ್ತು. ನಿವ್ವಳ ದೇಶೀಯ ಜಿಎಸ್’ಟಿ ಬೆಳವಣಿಗೆ ದರ ಇಳಿಕೆಯಾಗಿದೆ. ದರ ಸರಳೀಕರಣ ಬಳಿಕ 3 ತಿಂಗಳಲ್ಲಿ ಶೇ.1.7 ಮಾತ್ರ ಬೆಳವಣಿಗೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.8.9 ಬೆಳವಣಿಗೆ ಇತ್ತು. ಇದರಿಂದ ಕರ್ನಾಟಕದ ಬೊಕ್ಕಸಕ್ಕೆ 18,500 ಕೋಟಿ ರೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

   ಕರ್ನಾಟಕ ರಾಜ್ಯದ ಜಿಎಸ್​ಟಿ ಸಂಗ್ರಹಣೆಯೂ ಕುಸಿದಿದೆ. ರಾಜ್ಯದ ನಿವ್ವಳ ಜಿಎಸ್’ಟಿ ಸಂಗ್ರಹಣೆಯಲ್ಲಿ ಶೇ.3.1 ಬೆಳವಣಿಗೆ ಹೊಂದಿದ್ದು, ರಾಜ್ಯದ ಬೊಕ್ಕಸಕ್ಕೆ 18,500 ಕೋಟಿ ರೂ. ನಷ್ಟದ ಭೀತಿ ಎದುರಾಗಿದೆ. ಈ ವರ್ಷ 9,000 ಕೋಟಿಗಳ ಆದಾಯ ಕೊರತೆ ಸಾಧ್ಯತೆ ಇದೆ. ವಿಲೀನಗೊಳಿಸದಿರುವಿಕೆಯಿಂದ 9,500 ಕೋಟಿ ರೂ. ನಷ್ಟವಾಗಲಿದೆ. ಈ ನಷ್ಟವನ್ನು ಕೇಂದ್ರವು ರಾಜ್ಯಗಳಿಗೆ ಸರಿದೂಗಿಸಬೇಕು. ಪಾನ್ ಮಸಾಲಾ ಸೆಸ್ ಆದಾಯವನ್ನು 50:50 ಆಧಾರದ ಮೇಲೆ ರಾಜ್ಯಗಳೊಂದಿಗೆ ಹಂಚಿಕೆಗೆ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ.

Recent Articles

spot_img

Related Stories

Share via
Copy link