ಗುಬ್ಬಿ :
ತಾಲ್ಲೂಕಿನ ಹೇರೂರು ಬಳಿ ರಾಷ್ಟ್ರೀಯ ಹೆದ್ದಾರಿ 206 ರಸ್ತೆಯಲ್ಲಿ ಸಂಭವಿಸಿದ ಕಾರು ಮತ್ತು ಭೈಕ್ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು ಮತ್ತೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ತಾಲೂಕಿನ ದೊಡ್ಡಗುಣಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಸಂಜಯ್ (35) ಎಂದು ತಿಳಿದು ಬಂದಿದೆ. ಮತ್ತೊಬ್ಬರು ವೈಧ್ಯಾಧಿಕಾರಿ ಡಾ:ಕಿರಣ್ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಗುಣಿ ಆಸ್ಪತ್ರೆಯಿಂದ ಕೆಲಸವನ್ನು ಮುಗಿಸಿಕೊಂಡು ತುಮಕೂರಿನ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಅಪಘಾತ ಸಂಭವಿಸಿದ್ದು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/02/acc-gubbi.jpg)