ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಣೆ!

ಬೆಂಗಳೂರು: 

   2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ನಿರೀಕ್ಷೆಯಂತೆಯೇ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

   ಬಜೆಟ್ ಭಾಷಣ ಮಾಡಿರುವ ಸಿಎಂ, ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿ ಘೋಷಿಸಿದ್ದಾರೆ. ಬಜೆಟ್ ಗೂ ಮುನ್ನವೇ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡುವ ಸುಳಿವು ಸಿಕ್ಕಿತ್ತು. 

   ಅಲ್ಪಸಂಖ್ಯಾತರಿಗೆ ಸರ್ಕಾರಿ ಒಪ್ಪಂದಗಳಲ್ಲಿ ಶೇಕಡಾ ನಾಲ್ಕು ಮೀಸಲಾತಿ ನೀಡುವ ಪ್ರಸ್ತಾಪವನ್ನು ಸಚಿವ ಸಂಪುಟದ ಎದುರು ಇರಿಸಿದ್ದ ಸರ್ಕಾರದ ನಡೆಯನ್ನು ವಿರೋಧಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದೇಶದಲ್ಲಿ ಅನೇಕ ಇತರ ಸಮುದಾಯಗಳಿರುವಾಗ ಅಲ್ಪಸಂಖ್ಯಾತರೆಂದರೆ ಯಾವಾಗಲೂ ಮುಸ್ಲಿಮರು ಎಂದು ಏಕೆ ಕರೆಯಲಾಗುತ್ತದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದರು.

   “ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವೇ ಹೊರತು ಬೇರೆ ಯಾರನ್ನೂ ಅಲ್ಲವೇ? ಕಾಂಗ್ರೆಸ್‌ನ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಗಳು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುತ್ತವೆ” ಎಂದು ವಿಜಯೇಂದ್ರ ಹೇಳಿದ್ದರು.

Recent Articles

spot_img

Related Stories

Share via
Copy link