ಡಿ ರೂಪಾಗೆ ದೊಡ್ಡ ರಿಲೀಫ್‌ ನೀಡಿದ ಹೈಕೋರ್ಟ್‌….!

ಬೆಂಗಳೂರು

      ಡಿ. ರೂಪಾ ಅವರು ರೋಹಿಣಿ ಕುರಿತಂತೆ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ಹಾಗಾಗಿ ಇನ್ನು ಡಿ. ರೂಪಾ, ರೋಹಿಣಿ ವಿರುದ್ಧ ಆರೋಪಗಳನ್ನು ಮಾಡಬಹುದು, ಹೇಳಿಕೆಗಳನ್ನು ನೀಡಬಹುದು.

     ತಮ್ಮ ವಾದವನ್ನು ಆಲಿಸದೇ ಏಕಪಕ್ಷೀಯವಾಗಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ಡಿ. ರೂಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿ ಆದೇಶಿಸಿದೆ. ಈ ಆದೇಶದಿಂದ ವಿಚಾರಣಾ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವಾದಂತಾಗಿದೆ.

 

    ಅರ್ಜಿದಾರರ ವಾದವೇನು?; ಡಿ. ರೂಪಾ ಮೌದ್ಗಿಲ್ ಪರ ವಾದ ಮಂಡಿಸಿದ ವಕೀಲ ಮಧುಕರ್ ದೇಶಪಾಂಡೆ, ವಿಚಾರಣಾ ನ್ಯಾಯಾಲಯ ತಡೆಯಾಜ್ಞೆ ನೀಡಿದ ಬಳಿಕ ಪ್ರತಿವಾದಿಯಾಗಿರುವ ನಮ್ಮ ಕಕ್ಷಿಧಾರರಿಗೆ ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿರುವ ಎಲ್ಲಾ ದಾಖಲೆಗಳ ಪ್ರತಿಯೊಂದಿಗೆ ತಲುಪಿಸಬೇಕಾಗಿತ್ತು. ಆದರೆ, ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿರುವುದಾಗಿ ಹೇಳಿ ನಿರ್ಬಂಧಕಾಜ್ಞೆ ವಿಸ್ತರಣೆ ಮಾಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ನ್ಯಾಯಾಲಯ ನಿರ್ಬಂಧಕಾಜ್ಞೆ ವಿಸ್ತರಣೆಯನ್ನು ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap