ನವದೆಹಲಿ:
ಕಳೆದ ವಾರ ನಾಪತ್ತೆಯಾಗಿದ್ದ ಅನುರಾಗ್ ಮಾಲು ಅವರನ್ನು ಅನ್ನಪೂರ್ಣ ಪರ್ವತದಿಂದ ಜೀವಂತವಾಗಿ ರಕ್ಷಿಸಲಾಗಿದೆ. ಇದನ್ನು ಸೆವೆನ್ ಸಮ್ಮಿಟ್ ಟ್ರೆಕ್ಸ್ ದೃಢಪಡಿಸಿದೆ. ಅನುರಾಗ್ ಮಾಲು ಕಳೆದ ವಾರ ನೇಪಾಳದ ಅನ್ನಪೂರ್ಣ ಪರ್ವತದಿಂದ ಇಳಿಯುತ್ತಿದ್ದಾಗ ನಾಪತ್ತೆಯಾಗಿದ್ದರು.
ಸದ್ಯ ಅವರು ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅನುರಾಗ್ ಸಹೋದರ ಸುಧೀರ್ ಹೇಳಿದ್ದಾರೆ.
![](https://prajapragathi.com/wp-content/uploads/2023/04/anapoorna.jpg)