ಹಿಂದಿಯಲ್ಲಿ ಭಾಷಣ ಸ್ಪರ್ಧೆ ಕರವೇ ಮುತ್ತಿಗೆ

ತುಮಕೂರು:


ನೆಹರು ಯುವಕೇಂದ್ರ ಆಯೋಜಿಸಿರುವ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಭಾಷಣ ಸ್ಪರ್ಧೆಯಲ್ಲಿ ಹಿಂದಿ ಮತ್ತು ಆಂಗ್ಲ ಭಾಷೆಗೆ ಆದ್ಯತೆ ನೀಡಿ ಕನ್ನಡ ಕೈ ಬಿಟ್ಟಿರುವು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನೆಹರು ಯುವ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ನೆಹರು ಯುವಕೇಂದ್ರಗಳಲ್ಲಿ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡದೆ ಹಿಂದಿ ಮತ್ತು ಆಂಗ್ಲ ಭಾಷೆಗೆ ಪ್ರಾಧಾನ್ಯತೆ ನೀಡಿ, ಕನ್ನಡವನ್ನು ಕಡೆಗಣಿಸಿದ್ದು, ನೆಹರು ಯುವ ಕೇಂದ್ರದಲ್ಲಿ ಇಂತಹ ನಾಡ ವಿರೋಧಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ವಿರೋಧಿ ನಡೆ ಅನುಸರಿಸುತ್ತಿದ್ದು, ಕನ್ನಡಕ್ಕೆ ಮೊದಲ ಆದ್ಯತೆ ನೀಡಿ, ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪಟ್ಟುಹಿಡಿದರು. ಕಾರ್ಯಕ್ರಮ ರದ್ದು: ಕನ್ನಡ ವಿರೋಧಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದ ಬಗ್ಗೆ ನೆಹರು ಯುವ ಕೇಂದ್ರದ ಮುಖ್ಯಸ್ಥರಿಂದ ಕ್ಷಮಾ ಪತ್ರವನ್ನು ಪಡೆದ ಕನ್ನಡ ಹೋರಾಟಗಾರರು, ಕಾರ್ಯಕ್ರಮ ರದ್ದುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳಿಗೆ ನೆಹರು ಯುವ ಕೇಂದ್ರ ಆಯೋಜಿಸಿರುವ ಕಾರ್ಯಕ್ರಮಗಳನ್ನು ರದ್ದುಪಡಿಸಿ, ಕನ್ನಡದಲ್ಲಿಯೇ ಸ್ಪರ್ಧೆಯನ್ನು ಆಯೋಜಿಸುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥ್ ಗೌಡ, ವಿದ್ಯಾರ್ಥಿ ಘಟಕ ಅಧ್ಯಕ್ಷ ಜ್ಞಾನೇಶ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆನಂದ್ ಮೂರ್ತಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸ್ನೇಕ್ ಪ್ರೇಮ್, ನಗರ ವಿದ್ಯಾರ್ಥಿ ಘಟಕದ ಮುಖಂಡ ವೆಂಕಿ ತಾಲ್ಲೂಕು ಅಧ್ಯಕ್ಷ ಕೋರ ಲೋಕೇಶ್ ನಗರ ಅಧ್ಯಕ್ಷ ಕುಮಾರ್ ಮಹಿಳಾ ಘಟಕದ ಅಧ್ಯಕ್ಷೆ ಲೀಲಾವತಿ ಕರವೇ ಕಾರ್ಯಕರ್ತರುಗಳಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link