ಫೈನಲ್‌ ಆದ ಹಿರಿಯೂರು ಜೆಡಿಎಸ್‌ ಟಿಕೆಟ್‌ ..!

ಚಿತ್ರದುರ್ಗ

     ವಿಧಾನಸಭೆ ಚುನಾವಣೆ ಸನ್ನಿಹದಲ್ಲಿಇರುವಾಗ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ದುಡ್ಡು ಇದ್ದರೆ ಹೊರಗಿನವರು ಯಾರು ಬೇಕಾದರೂ ಬಂದು ಸ್ಪರ್ಧಿಸಿ ಹಿರಿಯೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎಂಬ ಹಣೆ ಪಟ್ಟಿಯನ್ನು ಹಿರಿಯೂರು ಕ್ಷೇತ್ರ ಕಟ್ಟಿಕೊಂಡಿದೆ.

     ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಈಗಾಗಲೆ ಭರ್ಜರಿ ಪ್ರಚಾರ ಶುರುಮಾಡಿದೆ. ಜೆಡಿಎಸ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚು ಇದ್ದರಿಂದ ಟಿಕೆಟ್ ಘೋಷಣೆಯಾಗಿರಲಿಲ್ಲ. ಇದೀಗ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ ಅವರಿಗೆ ಹಿರಿಯೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಟಿಕೆಟ್ ಖಚಿತದ ಬಗ್ಗೆ ಸ್ಥಳೀಯ ಪ್ರಮುಖ ಮುಖಂಡರಿಂದ ಮಾಹಿತಿ ಹೊರಬಿದ್ದಿದೆ.

    ಈ ಹಿಂದೆ ನಿರ್ಮಿತಿ ಕೇಂದ್ರದ ಅಧಿಕಾರಿ ಮೂಡಲಗಿರಿಯಪ್ಪ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಪಿಲಾಜಿನಲ್ಲಿ ಜಯಣ್ಣ, ಹಾಗೂ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷರಾಗಿದ್ದ ಶಿವಪ್ರಸಾದ್ ಗೌಡ ಇವರು ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷದ ವರಿಷ್ಠರು ಆಕಾಂಕ್ಷಿಗಳ ಜೊತೆ ಸಭೆ ನಡೆಸಿದ ಬಳಿಕ ಅಂತಿಮವಾಗಿ ರವೀಂದ್ರಪ್ಪ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ನಿಶ್ಚಿತವಾಗಿದೆ. ಶೀಘ್ರದಲ್ಲೇ ಪಕ್ಷದ ವರಿಷ್ಠರು ಹಿರಿಯೂರು ಕ್ಷೇತ್ರಕ್ಕೆ ಟಿಕೆಟ್‌ನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಬಹುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link