ಬೆಂಗಳೂರು :

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷತ ಇತರೆ ಮುಖಂಡರ ಸಮ್ಮುಖದಲ್ಲಿ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ನಿನ್ನೆ(ಬುಧವಾರ) ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ಚರ್ಚೆ ನಡೆಸಿದ್ದರು.
ಶರತ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ವಿರುದ್ಧ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸಿ ಸೋತಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ಬಡೆದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶರತ್ ಬಚ್ಚೇಗೌಡ ಬದಲಿಗೆ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಿತ್ತು. ಈ ಸಂದರ್ಭದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶರತ್ ಜಯ ಗಳಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








