ಬೆಂಗಳೂರು:
ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.
ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಚುನಾವಣೆಯಲ್ಲಿ ನೀಡಿತ್ತು. ಅದರಲ್ಲಿ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗಳಿಗೆ ಜಮಾ ಆಗುತ್ತಿದೆ. ಗೃಹಜ್ಯೋತಿಯ ನೋಂದಣಿ ಒಂದು ಕೋಟಿ ದಾಟಿದೆ. ಇಂದು ಗೃಹಲಕ್ಷ್ಮಿ ಜಾರಿಗೆ ಬರುತ್ತಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಲಿದ್ದಾರೆ.
ರೇಷನ್ ಕಾರ್ಡ್ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.
ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.
ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.
ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್ಗೆ ನೋಂದಣಿ ಮಾಡಿಸಬಹುದು.
ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/07/gruha-lakshmi.jpg)