ಹುಳಿಯಾರು :
ಪತ್ರಿಕೆಯ ವರದಿಯ ಫಲಶೃತಿಯಿಂದ ದೊಡ್ಡಎಣ್ಣೇಗೆರೆ ಗ್ರಾಪಂ ಮುಂದೆ ಹಾರಾಡುತ್ತಿದ್ದ ಹರಿದ ರಾಷ್ಟ್ರಧ್ವಜವನ್ನು ಬದಲಾಯಿಸಿ ಹೊಸ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ.
ರಾಷ್ಟ್ರ ಧ್ವಜಕ್ಕೆ ತನ್ನದೇಯಾದ ಗೌರವ ಘನತೆ ಇದೆ. ಹರಿದ, ಕೊಳಕಾದ, ಹಾಳಾದ ರಾಷ್ಟ್ರಧ್ವಜ ಹಾರಿಸುವದು ಅಪರಾಧ. ಆದರೂ ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ಧ್ವಜಸ್ಥಂಭದಲ್ಲಿ ಹರಿದ ದ್ವಜ ಹಾರಾಡುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಪತ್ರಿಕೆ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತು ಎಚ್ಚೆತ್ತುಕೊಂಡ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹೊಸ ರಾಷ್ಟ್ರಧ್ವಜ ಹಾರಿಸುತ್ತಿದ್ದಾರೆ. ಈ ಸಂಬಂಧ ಹಂದನಕೆರೆ ಪೊಲೀಸರು
ಪಂಚಾಯ್ತಿ ಕಛೇರಿಗೆ ಭೇಟಿ ನೀಡಿ ಹರಿದ ರಾಷ್ಟ್ರಧ್ವಜ ಹಾರಿಸುತ್ತಿದ್ದ ಬಗ್ಗೆ ಸಿಬ್ಬಂದಿ ಹಾಗೂ ಜನಪತ್ರಿನಿಧಿಗಳಿಂದ ಹೇಳಿಕೆ ಪಡೆದಿದ್ದಾರೆ.
ಗ್ರಾಪಂ ಕಛೇರಿಯಲ್ಲಿ ಎರಡ್ಮೂರು ರಾಷ್ಟ್ರಧ್ವಜ ಇರುತ್ತದೆ. ನಿತ್ಯ ಹಾರಿಸುತ್ತಿರುವ ರಾಷ್ಟ್ರಧ್ವಜ ಹಾಳಾದರೆ ತಕ್ಷಣ ಬದಲಾಯಿಸಿ ಹೊಸ ರಾಷ್ಟ್ರಧ್ವಜ ಹಾರಿಸಲಾಗುತ್ತದೆ. ಹಾಗಾಗಿ ನಮ್ಮ ಪಂಚಾಯ್ತು ಧ್ವಜ ಹರಿದಿರುವ ವಿಷಯ ತಿಳಿದ ತಕ್ಷಣ ಹೊಸ ರಾಷ್ಟ್ರಧ್ವಜ ಕೊಟ್ಟು ಬದಲಾಯಿಸುವಂತೆ ಸಿಬ್ಬಂದಿಗೆ ತಿಳಿಸಿದ್ದೆ. ಆದರೂ ಅದೇಕೆ ಬದಲಾಯಿಸಿಲ್ಲವೂ ತಿಳಿಯಲಿಲ್ಲ. ಕೆಲಸದ ಒತ್ತಡದಲ್ಲಿ ನಂತರದ ದಿನಗಳಲ್ಲಿ ಗಮನಿಸಲಿಲ್ಲ. ಇನ್ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇನೆ
ಅಡವಿಶ್ಕುಮಾರ್, ಪಿಡಿಓ, ದೊಡ್ಡಎಣ್ಣೇಗೆರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
