ನಾನು ಯಾವುದೇ ರೇಸ್‌ ನಲ್ಲಿ ಇಲ್ಲಾ : ಸತೀಶ್‌ ಜಾರಕೀಹೋಳಿ

ಬೆಂಗಳೂರು:

‌   ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನಿಲ್ಲ, ಮುಂದಿನ 4 ವರ್ಷಗಳ ಕಾಲ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ರಾಜ್ಯ ಸುತ್ತಿದ ಅನುಭವಸ್ಥರಿಗೆ ರಾಜ್ಯ ಕಾಂಗ್ರೆಸ್‌ ಸಾರಥ್ಯ ಸಿಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

   ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತೆ. ಅಧ್ಯಕ್ಷ ಸ್ಥಾನದ ಬದಲಾವಣೆ ಆಗಬೇಕೆಂದರೆ ಮೊದಲು ಆ ಸ್ಥಾನ ಖಾಲಿ ಆಗಬೇಕಲ್ವಾ? ಬದಲಾವಣೆ ಬದಲು ಅಧಿಕಾರ ವಿಸ್ತರಣೆಯೂ ಆಗಬಹುದಲ್ವಾ ಎಂದರು.

   ಲೋಕಸಭೆ ಚುನಾವಣೆವರೆಗೆ ಡಿ.ಕೆ. ಶಿವಕುಮಾರ್‌ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂಬ ಎಐಸಿಸಿ ಹೈಕಮಾಂಡ್‌ ಘೋಷಣೆ ಅವಧಿ ಮುಗಿದ ಬೆನ್ನಲ್ಲೇ, ಜಾರಕಿಹೊಳಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ. ಅದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟ ವಿಚಾರ. ಹೊಸ ಅಧ್ಯಕ್ಷರ ನೇಮಕಕ್ಕೆ ರಾಜ್ಯ ಸುತ್ತಿದ್ದ ಹಾಗೂ ಸಮರ್ಥರಿಗೆ ಅವಕಾಶ ನೀಡಬೇಕು. ಮುಂದಿನ ನಾಲ್ಕು ವರ್ಷ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವ ಶಕ್ತಿ ಇರುವವರು ಅಧ್ಯಕ್ಷರಾಗಲಿ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap