ಬೆಂಗಳೂರು:
ನಾನು ಸಿದ್ದರಾಮಯ್ಯಗೆ ಸ್ನೇಹಿತ ಅಲ್ಲ, ವಿಲನ್ ಆಗಿರೋದು ನಿಜ ಅಂತ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದಿನೇ ದಿನೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಆಡಳಿತ ರೂಢ ಕಾಂಗ್ರೆಸ್ ಪಕ್ಷದ ನಾಯಕರ ನಡುವಿನ ರಾಜಕೀಯ ಸಮರ ಮುಂದುವರೆದಿದೆ.
ನಿನ್ನೆಯಷ್ಟೇ ಕುಮಾರಸ್ವಾಮಿ ರಾಜಕೀಯ ವಿಲನ್ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದರು. ಇದಕ್ಕೆ ಇಂದು ದಳಪತಿ ಸಖತ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ನಾನು ಸಿದ್ದರಾಮಯ್ಯಗೆ ಸ್ನೇಹಿತ ಅಲ್ಲ, ವಿಲನ್ ಆಗಿರೋದು ನಿಜ. ನಾನು ಯಾಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸ್ನೇಹಿತ ಆಗಬೇಕು ಅಂತ ಕಿಡಿಕಾರಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
̧̤ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/08/kumaraswamy-h-d.jpg)