ಹಾಸನದಿಂದ ಸರ್ಧೆಗೆ ನಾನು ರೆಡಿ : ರೇವಣ್ಣ

ಬೆಂಗಳೂರು :

     ಪಕ್ಷ ತೀರ್ಮಾನಿಸಿದರೆ ಹಾಸನ ಸಹಿತ ಯಾವುದೇ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದು, ಈ ಮೂಲಕ ಹಾಸನದಿಂದ ಬೇಕಾದರೂ ಸ್ಪರ್ಧಿಸಬಲ್ಲೆ ಎಂದು ಹೇಳಿದ್ದಾರೆ.

     ಹಾಸನ ಟಿಕೆಟ್ ವಿಚಾರವಾಗಿ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಕುಟುಂಬದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಈ ಬಾರಿ ಹಾಸನ ಟಿಕೆಟ್ ಭವಾನಿ ರೇವಣ್ಣ ಅವರಿಗೆ ಕೊಡಬೇಕೆಂದು ರೇವಣ್ಣ ಕಟುಂಬ ಪಟ್ಟು ಹಿಡಿದಿದೆ. ಆದರೆ, ಇದಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಒಪುತ್ತಿಲ್ಲ. ಇದರಿಂದ ಕುಟುಂಬದಲ್ಲಿ ಟಿಕೆಟ್ ಫೈಟ್ ಜೋರಾಗಿದೆ.

    ಇದರ ಮಧ್ಯೆ  ರೇವಣ್ಣ ಅವರು ಹಾಸನ  ಕ್ಷೇತ್ರದಿಂದ ಸ್ಪರ್ಧೆ ಮಾಡುವುದಕ್ಕೆ ನಾನು ರೆಡಿ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದರೊಂದಿಗೆ ಭವಾನಿಗೆ ಟಿಕೆಟ್ ಸಿಗಲಿಲ್ಲ ಅಂದ್ರೆ, ಹಾಸನ ಕ್ಷೇತ್ರದಿಂದ ತಾವು ಸ್ಪರ್ಧಿಸುವ ಆಸೆ ಹೊರಹಾಕಿದ್ದಾರೆ.

    ಹಾಸನ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಹೆಚ್.ಡಿ.ರೇವಣ್ಣ ಸ್ಪರ್ಧಿಸಿ ಗೆಲ್ಲಲಿ. 50,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸುತ್ತೇನೆ. ಒಂದು ಮತ ಕಡಿಮೆಯಾದ್ರೂ ಮತ್ತೆ ಚುನಾವಣೆಗೆ ಹೋಗುತ್ತೇನೆಂದು ಎಂದು ಬಿಜೆಪಿ ಶಾಸಕ ಪ್ರೀತಂಗೌಡ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿರುವ ರೇವಣ್ಣ, ಪಕ್ಷ ಹೇಳಿದ್ರೆ ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಕ್ಕೆ ನಾನು ರೆಡಿ.

    ಶಾಸಕ ಪ್ರೀತಂಗೌಡ ಸವಾಲು ಸ್ವೀಕರಿಸಿದ್ದೇನೆ. ಸ್ಪರ್ಧೆಗೆ ಸಿದ್ಧನಿದ್ದೇನೆ. ಪಕ್ಷ ಹೇಳಿದ್ರೆ ಪ್ರೀತಂಗೌಡ ಸವಾಲು ಸ್ವೀಕರಿಸಲು ಸಿದ್ಧನಿದ್ದೇನೆ ಎಂದು ಘೋಷಣೆ ಮಾಡಿದರು. ಕೆಲವರ ಸವಾಲು ಸ್ವೀಕರಿಸಬೇಕಲ್ಲವೆ? ಕುಮಾರಸ್ವಾಮಿರವರೇ ನಮ್ಮ ನಾಯಕರು, ಅವರು ಹೇಳಿದಂತೆ ಕೇಳುತ್ತೇವೆ. ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರ ಗೆಲ್ಲಬೇಕೆಂಬುವುದು ನಮ್ಮ ಗುರಿ ಎಂದು ಹೇಳುವ ಮೂಲಕ ಹಾಸನ ಹಾಗೂ ಹೊಳೆನರಸೀಪುರದಲ್ಲಿ ಸ್ಪರ್ಧಿಸಿ ಗೊಂದಲ ನಿವಾರಣೆಗೆ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link