ಮತ್ತೆ ನಾನೇ ಮುಖ್ಯಮಂತ್ರಿ : ಹೆಚ್‌ ಡಿ ಕೆ

ಶಿವಮೊಗ್ಗ

        ಈಗಾಗಲೇ ಹಲವು ಸಮೀಕ್ಷೆಗಳಲ್ಲಿ ಆಡಳಿತರೂಢ ಬಿಜೆಪಿಗೆ ಅಘಾತವಾಗಿದ್ದು, ಮೋದಿ ಅಲೆ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ಮುಂದಾಗಿವೆ. ಇತ್ತ ರಾಜಕೀಯ ಪಕ್ಷಗಳ ನಾವೇ ಅಧಿಕಾರಕ್ಕೆ ಬರುವುದಾಗಿ ವಿಶ್ವಾಸವನ್ನ ವ್ಯಕ್ತಪಡಿಸಿದ್ದು, ಮತ್ತೆ ಕುಮಾರಸ್ವಾಮಿ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.

          ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಆರು ದಿನಗಳಷ್ಟೇ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಅಂತಿಮ ಹಂತದಲ್ಲಿ ಮತ ಓಲೈಕೆಗೆ ರಾಜಕೀಯ ಪಕ್ಷಗಳು ಮುಂದಾಗಿದ್ದು, ಹಿಂದಿನ ಸರ್ಕಾರದ ಸಾಧನೆಗಳ ಜೊತೆಗೆ ಬಜರಂಗಿಯೇ ರಾಜಕೀಯ ಪಕ್ಷಗಳ ಜಟಾಪಟಿಗೆ ಕಾರಣವಾಗಿದೆ.

          ಶಿವಮೊಗ್ಗದಲ್ಲಿ ಜಾತ್ಯತೀತ ಜನತಾದಳ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಹಲವು ಸಮೀಕ್ಷೆಯನ್ನ ಯಾವುದೇ ಕಾರಣಕ್ಕೂ ನಂಬಬೇಡಿ. ನನ್ನ ಮೇಲೆ ದೈವ ಶಕ್ತಿ ಇದೆ. ಹೀಗಾಗಿ, ನನ್ನನ್ನು ಬಿಟ್ಟರೆ ಬೇರೆಯವರು ಮುಖ್ಯಮಂತ್ರಿ ಆಗಲ್ಲಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಭವಿಷ್ಯ ನುಡಿದಿದ್ದಾರೆ.
      ನಾನು ರಾಜ್ಯದ ಜನರಿಗಾಗಿ, ರಾಜ್ಯದ ಅಭಿವೃದ್ದಿಗಾಗಿ ಪಂಚರತ್ನ ರಥಯಾತ್ರೆಯನ್ನ ನಡೆಸಿದ್ದು, ರಾಜ್ಯದ ಎಲ್ಲ ಭಾಗಗಳಲ್ಲೂ ನನ್ನ ಏಕಾಂಗಿ ಹೋರಾಟ ನಿರಂತರವಾಗಿ ನಡೆದಿದೆ. ಉತ್ತರ ಕರ್ನಾಟ ಭಾಗದಲ್ಲಿ ಈ ಬಾರೀ ಜೆಡಿಎಸ್‌ ಪಕ್ಷದ ಮೇಲೆ ಬಲ ಹೆಚ್ಚಾಗಿದ್ದು, ಈ ಬಾರಿ ಜೆಡಿಎಸ್‌ 30-35 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
 

Recent Articles

spot_img

Related Stories

Share via
Copy link
Powered by Social Snap