ಬೆಂಗಳೂರು:
ಜಾತ್ರೆ, ರಥೋತ್ಸವಗಳಲ್ಲಿ ಹಿಂದೂಯೇತರ ವಿಶೇಷವಾಗಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಮಾಹಿತಿಯಿಲ್ಲ, ಮಾಹಿತಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ವಿವಾದ ಕುರಿತು ತೀರ್ಪು ಬಂದ ನಂತರ ಮುಸ್ಲಿಂ ವ್ಯಾಪಾರಿಗಳು ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಮಾಡಿದ ಘಟನೆಯ ಮುಂದುವರಿದ ಭಾಗ ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧವಾಗಿದೆ.ಇದು ಸರಿಯಾದ ಕ್ರಮವಲ್ಲ ದುರದೃಷ್ಟಕರ, ಶಾಂತಿ-ಸುವ್ಯವಸ್ಥೆಗೆ ಧಂಗೆ ಬರಬಾರದು ಎಂದರು.
ಮುಸ್ಲಿಮರು ಆರ್ಥಿಕ ಬಹಿಷ್ಕಾರ ಹಾಕಿದರೆ ಹಿಂದೂಗಳಿಗೇ ತೊಂದರೆ; ಉಡುಪಿ ಮುಸ್ಲಿಂ ಮುಖಂಡರು
ಈ ಬಗ್ಗೆ ಮಾಹಿತಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ, ಈ ರೀತಿ ಆಗದಂತೆ ಜಾಗ್ರತೆ ವಹಿಸುತ್ತೇವೆ. ಪೊಲೀಸರು ಕಣ್ಣಿಟ್ಟು ಕಾಯುತ್ತಿದ್ದಾರೆ. ಆಯಕ್ಷನ್..ರಿಯಾಕ್ಷನ್..ಮುಂದುವರೆಸುವುದು ಸರಿಯಲ್ಲ. ಮನಸ್ಸುಗಳನ್ನು ಒಡೆಯುವ ಕೆಲಸ ಮಾಡಬಾರದು, ಸಮಾಜ ಒಟ್ಟಾಗಿ ಇಂಥದ್ದನ್ನೆಲ್ಲಾ ಸರಿ ಮಾಡಬೇಕು ಎಂದು ಹೇಳಿದ್ದಾರೆ.
ಬೆಲೆಯೇರಿಕೆ ಬಗೆಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿಧಾನಸೌಧದ ಮೊಗಸಾಲೆಯಲ್ಲಿ ಮಾತನಾಡಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
