ಸೋತ ಅಜಿತ್ ಚಿತ್ರಕ್ಕೆ ಶಾಕ್ ಕೊಟ್ಟ ಇಳಯರಾಜ….!

ಚೆನ್ನೈ:

     ಸಂಗೀತ ಸಂಯೋಜಕ ಇಳಯರಾಜ ಅವರು ಕೇಸ್ ಹಾಕುವುದರಲ್ಲಿ ಸದಾ ಮುಂದು.. ಯಾವುದೇ ಸಿನಿಮಾ ರಿಲೀಸ್ ಆಗಿ, ಅದರಲ್ಲಿ ತಮ್ಮ ಸಿನಿಮಾದ ಹಾಡುಗಳು ಇದ್ದರೆ ಅದಕ್ಕೆ ರಾಯಲ್ಟಿ ನೀಡಬೇಕು ಎಂದು ಒತ್ತಾಯಿಸಿ ಕೇಸ್ ಹಾಕುತ್ತಾರೆ. ‘ಮಂಜುಮ್ಮೇಲ್ ಬಾಯ್ಸ್’ ವಿರುದ್ಧ ಅವರು ಕೇಸ್ ಹಾಕಿ ಗೆದ್ದರು. ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ ವಿರುದ್ಧವೂ ಅವರು ಅಪಸ್ವರ ತೆಗೆದಿದ್ದರು. ಈಗ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರದ ಮೇಲೆ ಅವರ ದೃಷ್ಟಿ ಹೋಗಿದೆ.

   ಅಧಿಕ್ ರವಿಚಂದ್ರನ್ ನಿರ್ದೇಶನದ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ ಅಜಿತ್ ಹೀರೋ. ಈ ಚಿತ್ರ ಏಪ್ರಿಲ್ 10ರಂದು ರಿಲೀಸ್ ಆಯಿತು. ಸಿನಿಮಾಗೆ ಒಳ್ಳೆಯ ವಿಮರ್ಶೆ ಸಿಕ್ಕಿಲ್ಲ. ಈ ಚಿತ್ರವನ್ನು ನಿರ್ಮಾಣ ಮಾಡಿದ ಮೈತ್ರಿ ಮೂವೀ ಮೇಕರ್ಸ್ ಅವರಿಗೆ ಈ ಬಗ್ಗೆ ಚಿಂತೆ ಉಂಟಾಗಿದೆ. ಹೀಗಿರುವಾಗಲೇ ಇಳಯರಾಜ ಅವರು ಕ್ಯಾತೆ ತೆಗೆದಿದ್ದಾರೆ.

   ‘ನನ್ನ ಮೂರು ಕಂಪೋಸೀಷನ್​ಗಳು ಸಿನಿಮಾದಲ್ಲಿ ಬಳಕೆ ಆಗಿವೆ. ಇದಕ್ಕೆ ಯಾವುದೇ ಒಪ್ಪಿಗೆ ಪಡೆದಿಲ್ಲ ಅಥವಾ ರಾಯಲ್ಟಿ ನೀಡಿಲ್ಲ’ ಎಂದು ಇಳಯರಾಜ ದೂರಿದ್ದಾರೆ. ಈ ಬಗ್ಗೆ ಚಿತ್ರದ ನಿರ್ಮಾಪಕ ನವೀನ್ ಅವರು ಪ್ರತಿಕ್ರಿಯಿಸಿದ್ದಾರೆ. ‘ನಾವು ಯಾವುದೇ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ‘ನಾವು ಮ್ಯೂಸಿಕ್ ಕಂಪನಿಗಳಿಂದ ಅಗತ್ಯ ಒಪ್ಪಿಗೆ ಪಡೆದಿದ್ದೇವೆ. ಈ ಮ್ಯೂಸಿಕ್ ಕಂಪನಿಗಳೇ ಹಕ್ಕನ್ನು ಹೊಂದಿವೆ. ನಾವು ಕಾನೂನು ಪ್ರಕಾರವೇ ಅದನ್ನು ಮಾಡಿದ್ದೇವೆ’ ಎಂದು ನವೀನ್ ಹೇಳಿದ್ದಾರೆ. 

   ಇಳಯರಾಜ ಅವರು ಈಗ ಮೈತ್ರಿ ಮೂವೀ ಮೇಕರ್ಸ್ ಬಳಿ ದೊಡ್ಡ ಬೇಡಿಕೆ ಒಂದನ್ನು ಇಟ್ಟಿದ್ದಾರೆ. ಅವರು ಬಹಿರಂಗ ಕ್ಷಮೆ ಕೇಳಬೇಕು ಮತ್ತು 5 ಕೋಟಿ ರೂಪಾಯಿ ನೀಡಬೇಕು. ಇಷ್ಟೇ ಅಲ್ಲ ಹಾಡುಗಳನ್ನು ಸಿನಿಮಾದಂದ ತೆಗೆಯುಬೇಕು ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣ ಶೀಘ್ರವೇ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

Recent Articles

spot_img

Related Stories

Share via
Copy link