ಭಾರತವನ್ನು ನೋಡಿ ಸ್ವಾಭಿಮಾನ ಕಲಿಯಬೇಕು: ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್(ಪಾಕಿಸ್ತಾನ):

ಪಾಕಿಸ್ತಾನದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಹಾಡಿ ಹೊಗಳಿದ್ದಾರೆ. ಯಾವುದೇ ಸೂಪರ್​ ಪವರ್ ರಾಷ್ಟ್ರ ಭಾರತದ ವಿರುದ್ಧ ಮಾತನಾಡುವುದಿಲ್ಲ.

ಭಾರತದ ವಿದೇಶಾಂಗ ನೀತಿಗಳು ಅಷ್ಟೊಂದು ಬಲಿಷ್ಟವಾಗಿವೆ ಎಂದು ಇಮ್ರಾನ್ ಖಾನ್ ಭಾರತವನ್ನು ಹಾಡಿ ಹೊಗಳಿದ್ದಾರೆ. ಕೆಲವು ವಾರಗಳಿಂದ ಪಾಕಿಸ್ತಾನದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಮ್ರಾನ್ ಕುರ್ಚಿಗೆ ಕಂಟಕ ಎದುರಾಗಿದೆ. ಈ ಬೆನ್ನಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲೇಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈ ರೀತಿಯಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾವುದೇ ದೇಶದ ಪರ ನಿರ್ಣಯ ತೆಗೆದುಕೊಳ್ಳಲು ಭಾರತ ನಿರಾಕರಿಸಿದ್ದು, ಈ ವೇಳೆ ಯಾವ ದೇಶವೂ ಭಾರತದ ವಿರುದ್ಧ ನಿಲ್ಲಲು ಸಾಧ್ಯವಾಗಲಿಲ್ಲ. ಆದರೆ ಯೂರೋಪಿಯನ್ ಯೂನಿಯನ್​ನ ರಾಜತಾಂತ್ರಿಕ ಅಧಿಕಾರಿಗಳು ಪಾಕಿಸ್ತಾನವನ್ನು ರಷ್ಯಾದ ವಿರುದ್ಧ ಮಾತನಾಡಬೇಕು ಎಂದು ಒತ್ತಡ ಹೇರುತ್ತಲೇ ಇದ್ದರು.

ಆದರೆ ಭಾರತವನ್ನು ಒತ್ತಾಯಿಸುವ ಧೈರ್ಯ ಆ ಅಧಿಕಾರಿಗಳಿಗೆ ಇರಲಿಲ್ಲ ಎಂದು ನಮ್ಮ ವಿದೇಶಾಂಗ ನೀತಿಯೂ ಭಾರತೀಯ ವಿದೇಶಾಂಗ ನೀತಿಯಂತೆ ಸಾರ್ವಭೌಮವಾಗಿರಬೇಕು, ಭಾರತವನ್ನು ನೋಡಿ ಪಾಕಿಸ್ತಾನ ಸ್ವಾಭಿಮಾನವನ್ನು ಕಲಿಯಬೇಕು ಎಂದು ಇಮ್ರಾನ್ ಹೇಳಿದ್ದಾರೆ.

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು, ಸ್ಥಳೀಯ ಭಾಷೆಗಳಲ್ಲ; ಭಾಷೆ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಭಾರತೀಯರನ್ನು ‘ಖುದ್ದರ್ ಕ್ವಾಮ್’ ಎಂದು ಇಮ್ರಾನ್ ಖಾನ್ ಬಣ್ಣಿಸಿದ್ದಾರೆ. ಖುದ್ದರ್ ಕ್ವಾಮ್ ಎಂದರೆ ‘ಬಹಳ ಸ್ವಾಭಿಮಾನಿಗಳು’ ಎಂಬ ಅರ್ಥವಿದ್ದು, ಯಾವುದೇ ಸೂಪರ್​ಪವರ್ ಭಾರತಕ್ಕೆ ಷರತ್ತುಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದರ ಜೊತೆಗೆ ಸುಪ್ರೀಂ ಕೋರ್ಟ್ ಅವಿಶ್ವಾಸ ನಿರ್ಣಯವನ್ನು ಮಂಡಿಸಬೇಕೆಂದು ತೀರ್ಪು ನೀಡಿದ್ದು, ಆ ತೀರ್ಪಿನಿಂದ ನಾನು ನಿರಾಸೆಗೊಂಡಿದ್ದೇನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಅಮಾನತು

ಇಂದು ಅವಿಶ್ವಾಸ ನಿರ್ಣಯದ ಮತದಾನ: ನ್ಯಾಷನಲ್ ಅಸೆಂಬ್ಲಿಯಲ್ಲಿ ಇಮ್ರಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಡೆಪ್ಯುಟಿ ಸ್ಪೀಕರ್ ಖಾಸಿಂ ಸೂರಿ ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದು, ಇಂದು ಬೆಳಗ್ಗೆ 10:30ರ ನಂತರ ಅವಿಶ್ವಾಸ ನಿರ್ಣಯದ ಮತದಾನ ನಡೆಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಇದರ ಜೊತೆಗೆ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನವನ್ನು ಮತ ಚಲಾವಣೆ ಮುಗಿಯುವವರೆಗೆ ಮುಂದೂಡಬಾರದೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವಿಶ್ವಾಸ ನಿರ್ಣಯದ ಮತದಾನವನ್ನು ಇಮ್ರಾನ್ ಖಾನ್ ಎದುರಿಸಲಿದ್ದು, ಪಾಕ್ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap