ನವದೆಹಲಿ :
ಜೂನ್ 1 ರಂದು ನಡೆಯಲಿರುವ ಇಂಡಿಯಾ ಬ್ಲಾಕ್ ಸಭೆಗೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಜರಾಗುವುದಿಲ್ಲ. ಚಂಡಮಾರುತ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯ ಹಾಗೂ ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನದ ಕಾರಣ ಮಮತಾ ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ.
ಸಭೆಗೆ ನಾನು ಹೋಗದಿದ್ದರೂ ನನ್ನ ಮನಸ್ಸು ಅಲ್ಲೆ ಇರುತ್ತದೆ ಎಂದು ಹೇಳಿದ್ದಾರೆ. ಇನ್ನು ಲೋಕಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ಜೂನ್ 1ರಂದು ನಡೆಯಲಿದ್ದು ಅದೇ ದಿನ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.
ಕೋಲ್ಕತ್ತಾ ದಕ್ಷಿಣ ಮತ್ತು ಕೋಲ್ಕತ್ತಾ ಉತ್ತರ ಸೇರಿದಂತೆ ಒಂಬತ್ತು ಕ್ಷೇತ್ರಗಳಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ಜಾದವ್ಪುರ, ದುಮ್ಡಮ್, ಬರಾಸತ್, ಬಸಿರ್ಹತ್, ಜಯನಗರ, ಮಥುರಾಪುರ ಮತ್ತು ಡೈಮಂಡ್ ಹಾರ್ಬರ್ ನಲ್ಲಿ ಮತದಾನ ನಡೆಯಲಿವೆ.
![](https://prajapragathi.com/wp-content/uploads/2024/05/ghatbandan.gif)