ಬೆಂಗಳೂರು :
ಸೆಮಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಉಚಿತ ಆಹಾರ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ 2ನೇ ಅಲೆ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 10ರಿಂದ ಮೇ 24ನೇ ತಾರೀಖಿನಿವರೆಗೆ ಲಾಕ್ಡೌನ್ ಆದೇಶ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟವನ್ನ ಎದುರಿಸುವ ದಿನಗೂಲಿ ಕಾರ್ಮಿಕರು ಸೇರಿದಂತೆ ಬಡತನ ರೇಖೆಯ ಕೆಳಗಿರುವ ಯಾರೂ ಸಹ ಉಪವಾಸದಿಂದ ಇರಬಾರದು. ಹೀಗಾಗಿ ಇಂದಿರಾ ಕ್ಯಾಂಟೀನ್ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನ ಉಚಿತವಾಗಿ ನೀಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅನ್ವಯವಾಗುವಂತೆ ಸುತ್ತೋಲೆಯನ್ನ ಪ್ರಕಟಿಸಲಾಗಿದೆ.
ಈ ಸಂಬಂಧ ಪೌರಾಡಳಿತ ಇಲಾಖೆ ಆದೇಶ ಹೊರಡಿಸಿದ್ದು, ಉಪಾಹಾರಕ್ಕೆ ಐದು ರೂ., ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಹತ್ತು ರೂ. ನೀಡಬೇಕಾಗಿತ್ತು. ದುರ್ಬಲ ವರ್ಗದವರು, ಬಡ ವ್ಯಾಪಾರಿಗಳು, ಕಾರ್ಮಿಕರು ಸಂಕಷ್ಟದಲ್ಲಿರುವುದರಿಂದ ಪೌರಾಡಳಿತ ಇಲಾಖೆ ಆಹಾರದ ವೆಚ್ಚ ಭರಿದಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
