ಸೇತುವೆ ನಿರ್ಮಿಸಲು ಒತ್ತಾಯ

ಹುಳಿಯಾರು:

ಹುಳಿಯಾರು ಹೋಬಳಿಯ ಕೆಂಕೆರೆ ಬರದಲೇಪಾಳ್ಯ ಗ್ರಾಮಗಳ ಮಧ್ಯೆ ಇರುವ ರಸ್ತೆಯಲ್ಲಿ ಮಳೆ ಬಂದರೆ ಹಳ್ಳದ ನೀರು ಹರಿದು ಸಂಚಾರ ಸ್ಥಗಿತವಾಗುತ್ತದೆ. ಹಾಗಾಗಿ ಈ ರಸ್ತೆಯಲ್ಲಿ ಸೇತುವೆ ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮಳೆ ಬಂದೆ ಹಳ್ಳದ ನೀರು ಸುಮಾರು 3 ರಿಂದ 4 ಅಡಿ ನಿಂತು ಸಂಚಾರ ಅಸ್ತವ್ಯಸ್ತವಾಗುತ್ತದೆ. ಹೈನುಗಾರರು ನಿತ್ಯ ಬೆಳಗ್ಗೆ ಸಂಜೆ ಹಾಲು ಹಾಕಲು ಕೆಂಕೆರೆ ಡೇರಿಗೆ ಬಂದು ಹೋಗಲು ತೊಂದರೆಯಾಗುತ್ತದೆ.

ಅಲ್ಲದೆ ದನಕರುಗಳು ಓಡಾಡಲು, ವಿದ್ಯಾರ್ಥಿಗಳು ಶಾಲೆಗೆ ಬಂದೋಗಲು ಭಾರಿ ತೊಂದರೆಯಾಗುತ್ತದೆ. ಹಾಗಾಗಿ ಈ ಹಳ್ಳದ ನೀರು ಹರಿಯಲು ಸೇತುವೆ ನಿರ್ಮಿಸಿಕೊಡುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಈಗಾಲಾದರೂ ಕೆಂಕೆರೆಯಿಂದ ಬರದಲೇಪಾಳ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link