ಕಠ್ಮಂಡು:
![](http://prajapragathi.com/wp-content/uploads/2019/04/01_04_2019-nepal_19092347.gif)
ನೆರೆಯ ನೇಪಾಳದಲ್ಲಿ ಸೃಷ್ಠಿಯಾಗಿರುವ ಚಂಡಮಾರುತದ ಪರಿಣಾಮವಾಗಿ ಸುರಿದ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಸುಮಾರು 27 ಮಂದಿ ಸಾವನ್ನಪ್ಪಿದ್ದು 400ಕ್ಕೂ ಅಧಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾರಾ ಹಾಗೂ ಪರ್ಸಾ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅನೇಕ ಮಂದಿ ಸಾವನ್ನಪ್ಪಿದ್ದು ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರ. ಆದರೆ ಪರ್ಸಾ ಜಿಲ್ಲೆಯಲ್ಲಿ ಮಳೆ ಇನ್ನೂ ನಿಂತಿಲ್ಲ ಮತ್ತು ಸಾವಿನ ಸಂಖ್ಯೆ ಹೆಚ್ಚಬಹುದೆಂದು ಪರ್ಸಾ ಜಿಲ್ಲಾ ಪೋಲೀಸ್ ಅಧಿಕಾರಿಗಳು ಹೇಳಿದ್ದಾರೆ. ಚಂಡಮಾರುತವು ಕಠ್ಮಂಡುವಿನಿಂದ ಸುಮಾರು 128 ಕಿಲೋಮೀಟರ್ ದೂರದಲ್ಲಿರುವ ಬಾರಾ ಜಿಲ್ಲೆಯಲ್ಲಿ ತನ್ನ ರುದ್ರನರ್ತನ ತೋರಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/01_04_2019-nepal_19092347.gif)