ಪಾಕಿಸ್ತಾನ
ಕಾಶ್ಮೀರ ವಿವಾದವನ್ನು ಬಗೆಹರಿಸದ ಹೊರತು ಭಾರತದೊಂದಿಗೆ ಯಾವುದೇ ಶಾಂತಿಮಾತುಕತೆಯಾಗಲಿ ಅಥವಾ ಹೊಂದಾಣಿಕೆಗೆ ಸಿದ್ದವಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ತಿಳಿಸಿದ್ದಾರೆ.
ಅವರು ವಾಷಿಂಗ್ಟನ್ ನಲ್ಲಿ ನಿನ್ನೆ ಕಾರ್ಯತಂತ್ರ ಮತ್ತು ಅಂತಾರಾಷ್ಟ್ರೀಯ ಅಧ್ಯಯನಗಳ ಚಿಂತಕರ ಸಮಾವೇಶ ವನ್ನುದ್ದೇಶಿಸಿ ಮಾತನಾಡಿ, ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯೆ ಪ್ರವೇಶಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸಿದ್ದಾರೆ.
ನೆರೆಯ ದೇಶಗಳಲ್ಲಿ ಶಾಂತಿ ನೆಲೆಸಬೇಕೆಂದು ನಮ್ಮ ಸರ್ಕಾರ ಬಯಸುತ್ತದೆ. ಆರ್ಥಿಕ ಸುಧಾರಣೆಗೆ ಮತ್ತು ಇತರ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ನಮ್ಮ ದೇಶದ ಅಜೆಂಡಾವನ್ನು ಸಾಧಿಸುವತ್ತ ಗಮನ ಹರಿಸಲು ನಮಗೆ ಶಾಂತಿ ಬೇಕು. ಹಾಗೆಂದು ಭಾರತದೊಂದಿಗೆ ಶಾಂತಿಮಾತುಕತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದು ನಮ್ಮ ಘನತೆ, ಗೌರವಕ್ಕೆ ತಕ್ಕುದಾದುದಲ್ಲ, ಕಾಶ್ಮೀರ ಸಮಸ್ಯೆಯನ್ನು ಭಾರತ ಬಗೆಹರಿಸದಿದ್ದರೆ ಶಾಂತಿ ಮಾತುಕತೆಗೆ ನಾವು ಖಂಡಿತಾ ಸಿದ್ದವಿಲ್ಲ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ