ಕೌಲಾಲಂಪುರ್:
ಇಸ್ಲಾಮಿಕ್ ಬೋಧಕ ಜಾಕಿರ್ ನಾಯಕ್ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕೇಳಿದ್ದಾರೆ ಎಂಬ ಹೇಳಿಕೆಯನ್ನು ಮಲೇಷ್ಯಾ ಪ್ರಧಾನಿ ಮಹಾತಿರ್ ಮೊಹಮದ್ ತಳ್ಳಿಹಾಕಿದ್ದಾರೆ. ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದಾಗ, ಅವರು ಈ ವ್ಯಕ್ತಿಯ ಗಡಿಪಾರಿಗೆ ನಮ್ಮ ಬಳಿಯಲ್ಲಿ ಯಾವುದೇ ರೀತಿಯ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ರಷ್ಯಾದ ಫಾರ್ ಈಸ್ಟರ್ನ್ ನಗರದಲ್ಲಿ ನಡೆದ 5 ನೇ ಪೂರ್ವ ಆರ್ಥಿಕ ವೇದಿಕೆಯಲ್ಲಿ ಭೇಟಿಯಾಗಿದ್ದಲ್ಲದೆ ಅದರ ಹೊರತಾಗಿಯೂ ಪ್ರಧಾನಿ ಮೋದಿ ಅವರು ಮಹಾತಿರ್ ಮೊಹಮದ್ ಅವರನ್ನು ಭೇಟಿ ಮಾಡಿದ್ದರು. ಅವರ ಭೇಟಿಯ ವೇಳೆಯಲ್ಲಿ ಜಾಕೀರ್ ನಾಯಕ್ ಅವರ ಗಡಿಪಾರಿನ ಕುರಿತಾಗಿ ಮಾತುಕಕತೆ ನಡೆದಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಎಂದು ಹೇಳಿದ್ದಾರೆ.
ಭೇಟಿಯ ವೇಳೆಯಲ್ಲಿ ಪ್ರಧಾನಿ ಮೋದಿ ಜಾಕಿರ್ ನಾಯಕ್ ಅವರ ಹಸ್ತಾಂತರದ ಕುರಿತಾಗಿ ವಿಷಯ ಪ್ರಸ್ತಾಪಿಸಿದ್ದರು . ಈ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಅಧಿಕಾರಿಗಳು ಸಿಂಗಪೂರ್ ಅಧಿಕಾರಿಗಳ ಜೊತೆಯಲ್ಲಿ ಸಂಪರ್ಕದಲ್ಲಿರುತ್ತಾರೆ ಎಂದು ಗೋಖಲೆ ಆಗ ಹೇಳಿದ್ದರು.
ಕಳೆದ ಮೂರು ವರ್ಷಗಳಿಂದ ಮಲೇಷ್ಯಾದಲ್ಲಿ ನೆಲೆಸಿರುವ ಜಾಕಿರ್ ನಾಯಕ್, ಕೋಮು ಅಸಮಾನತೆಯನ್ನು ಪ್ರಚೋದಿಸುವ ಮತ್ತು ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಜುಲೈ 2016 ರಂದು ಢಾಕಾದ ಹೋಲೆ ಆರ್ಟಿಸನ್ ಬೇಕರಿಯಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಭಾರತ ಮತ್ತು ಬಾಂಗ್ಲಾದೇಶದಲ್ಲೂ ಪ್ರಮುಖ ಆರೋಪಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹಿಂದಿನ ಸರ್ಕಾರದ ಅವದಿಯಲ್ಲಿ ಜಾಕಿರ್ ನಾಯಕ್ ಅವರಿಗೆ ಶಾಶ್ವತ ಪೌರತ್ವ ನೀಡಲಾಗಿತ್ತು ಮತ್ತು ಅದರ ವಿಚಾರವಾಗಿ ನಮ್ಮ ಸರ್ಕಾರ ಅವರನ್ನು ಗಡಿಪಾರು ಮಾಡಿ ಸ್ಥಾಳಾಂತರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/modi-in-malaysiajpg.gif)