ಇಸ್ಲಾಮಾಬಾದ್
ಭಾರತೀಯ ವಾಯುಸೇನೆ ಬಾಲಾಕೋಟ್ನಲ್ಲಿ ವಾಯುದಾಳಿ ನಡೆಸಿರುವುದು ನಿಜ ಎಂದು ಕೊನೆಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ ಇದೀಗ ಮತ್ತೊಂದು ದಾಳಿಯಾಗುವ ಆತಂಕದಲ್ಲಿದ್ದಾರೆ.
ಪುಲ್ವಾಮಾ ದಾಳಿಗೆ ಕೇಂದ್ರ ಸರ್ಕಾರ ದಿಟ್ಟ ಪ್ರತೀಕಾರ ತೀರಿಸಿಕೊಂಡಿತ್ತು. ಈ ಮೂಲಕ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ನೀಡಿತ್ತು ಇದನ್ನು ಅರಗಿಸಿಕೊಳ್ಳಲಾಗದೆ ಪಾಕ್ ವಾಯುದಾಳಿಯನ್ನು ಒಪ್ಪಿಕೊಳ್ಳಲು ಮುಂದಾಗಿರಲಿಲ್ಲ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370)ವನ್ನು ಕಿತ್ತೆಸೆದಿರುವ ಭಾರತ ಇದೀಗ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಾಲಾಕೋಟ್ ದಾಳಿಗಿಂತಲೂ ಭಯಾನಕ ದಾಳಿಗೆ ಸಿದ್ಧತೆ ನಡೆಸಿದೆ ಎಂದು ಇಮ್ರಾನ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಇಮ್ರಾನ್ ಖಾನ್ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಭಾರತದ ವಿರುದ್ದ ವಾಗ್ದಾಳಿ ನಡೆಸಿದರು ಎಂದು ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/07/imran-khan-on-pulwama-attack_fa18f6fe-457b-11e9-9b94-c272560e6ac5.gif)