ಐಪಿಎಲ್ ಹಬ್ಬವೋ -ತಿಥಿಯೋ – ಶಾಪವೋ, ಕ್ರಿಕೆಟ್ ಆಟ-ಬೆಟ್ಟಿಂಗ್ ದಂಧೆ-ಜೂಜಿನ ಮಜಾ ಪ್ರಾರಂಭ

 

ಕ್ರಿಕೆಟ್ ಆಟಗಾರರು-ಫ್ರಾಂಚೈಸಿಗಳು -ಕ್ಲಬ್ ಬಾರ್‍ಗಳು – ಜಾಹೀರಾತುದಾರರು-ಅದರ ಪ್ರಚಾರ ರಾಯಭಾರಿಗಳು-ಎಲೆಕ್ಟ್ರಾನಿಕ್ ಟಿವಿ ವಾಹಿನಿಗಳು – ಬೆಟ್ಟಿಂಗ್ ಏಜೆಂಟುಗಳು ಮುಂತಾದ ಎಲ್ಲರಿಗೂ ಹಬ್ಬ….. ಬೆಟ್ಟಿಂಗ್ ಹುಚ್ಚಿನ ಮನೆಯವರಿಗೆ ಶಾಪ, ಇನ್ನೂ ನತದೃಷ್ಟರಿಗೆ ತಿಥಿ…….

ಈ ಆಟ ಒಂದು ದೊಡ್ಡ ಆರ್ಥಿಕ ಚಟುವಟಿಕೆಗಳನ್ನು ಹೊಂದಿದೆ ಎಂಬುದು ನಿಜ. ಆದರೆ ಅಷ್ಟೇ ಸಮಾಜ ಘಾತಕವೂ ಆಗಿದೆ.
ಸಮಾಜದಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇರುತ್ತದೆ. ಆಯ್ಕೆ ಜನರಿಗೆ ಬಿಟ್ಟಿದ್ದು ಎಂದು ಸಮಾಧಾನಕರ ಉತ್ತರ ಹೇಳಬಹುದು. ಆದರೆ ಈ ಕೊಳ್ಳುಬಾಕ ಸಂಸ್ಕೃತಿ – ಕಾಪೆರ್Çರೇಟ್ ವ್ಯವಸ್ಥೆ, ಜನರ ದುರಾಸೆಯ ಪ್ರವೃತ್ತಿ, ಸುಲಭವಾಗಿ ಹಣ ಮಾಡಬೇಕು ಎಂಬ ಮನೋಭಾವ ಎಲ್ಲವೂ ಇರುವಾಗ ಅವರಿಗೆ ಇದೇ ಲಾಭದ ಮಾರ್ಗಗಳು. ಇದನ್ನು ಕೇವಲ ಹಣದ ದೃಷ್ಟಿಯಿಂದ ಮಾತ್ರ ನೋಡದೆ ವ್ಯವಸ್ಥೆಯ ಅಧಃಪತನದ ಹಾದಿಯಾಗಿ ಗುರುತಿಸಬೇಕು.

ವಿವಿಧ ರೀತಿಯ ಆಕರ್ಷಕ ಲಾಭದ ಬೆಟ್ಟಿಂಗ್ ಆ್ಯಪ್‍ಗಳು ಮೊಬೈಲ್ ಮಾರುಕಟ್ಟೆಯಲ್ಲಿ ದಾಳಿ ಇಟ್ಟಿವೆ. ಸಾಕಷ್ಟು ಮಧ್ಯಮ ವರ್ಗದ ಜನರೇ ಇದರಲ್ಲಿ ಹಣ ಹೂಡುತ್ತಾರೆ. ಈ ಜೂಜಿನಲ್ಲಿ ಲಾಭ ಮಾಡಿ ಯಶಸ್ವಿಯಾದವರು ತುಂಬಾ ತುಂಬಾ ಕಡಿಮೆ. ನಷ್ಟ ಅನುಭವಿಸಿ ಎಲ್ಲವನ್ನೂ ಕಳೆದುಕೊಂಡವರು ಕೊನೆಗೆ ಪ್ರಾಣವನ್ನೂ ಕಳೆದುಕೊಂಡವರೇ ಹೆಚ್ಚು.

 ಈ ಇಬ್ಬರಿಂದ ಪಂದ್ಯ ಸೋತೆವು; 205 ರನ್ ಗಳಿಸಿಯೂ ಪಂಜಾಬ್ ವಿರುದ್ಧ ಸೋತಿದ್ದೇಕೆ ಎಂಬುದನ್ನು ಬಿಚ್ಚಿಟ್ಟ ಫಾಫ್

ಪ್ರಾರಂಭದಲ್ಲಿ ಸರಳವಾಗಿ ಖುಷಿ ಖುಷಿಯಾಗಿ ಇದು ನಮ್ಮನ್ನು ಸೆಳೆಯತೊಡಗುತ್ತದೆ. ಹಾಗೆಯೇ ಮುಂದುವರೆದಂತೆ ಆಳಕ್ಕೆ ಎಳೆದೊಯ್ಯುತ್ತದೆ. ಕೊನೆಗೆ ನಮ್ಮ ಅಸ್ತಿತ್ವವನ್ನೇ ಮರೆಸುತ್ತದೆ. ನಮ್ಮ ಭಾವನೆಗಳನ್ನು ಬೆಟ್ಟಿಂಗ್ ನಿಯಂತ್ರಿಸುತ್ತದೆ. ಮಾನ ಮರ್ಯಾದೆ ಕುಟುಂಬದ ಜವಾಬ್ದಾರಿ ಭವಿಷ್ಯದ ಕಷ್ಟಗಳು ಯಾವುದೂ ಆ ಕ್ಷಣದಲ್ಲಿ ನೆನಪಾಗದಂತೆ ಮಾಡುತ್ತದೆ.

ನಮ್ಮಲ್ಲಿ ಸೋಮಾರಿತನ ಬೆಳೆಸುತ್ತದೆ. ಹಣಕ್ಕಾಗಿ ಯಾರನ್ನು ಬೇಕಾದರೂ ಅಂಗಲಾಚುವ, ಏನನ್ನೂ ಬೇಕಾದರೂ ಮಾಡುವ, ಯಾವುದನ್ನು ಬೇಕಾದರೂ ಮಾರುವ ಮನಸ್ಥಿತಿ ಸೃಷ್ಟಿ ಮಾಡುತ್ತದೆ. ಅಪರೂಪದ ಪ್ರಕರಣಗಳನ್ನು ಹೊರತುಪಡಿಸಿ ಬಹುತೇಕರು ಇದರಿಂದ ಹೊರಬರಲಾಗದೆ ಹತಾಶರಾಗುತ್ತಾರೆ. ಕೆಲವರು ದುಷ್ಚಟಗಳಿಗೆ ಬಲಿಯಾದರೆ, ಮತ್ತೆ ಕೆಲವರು ಎಲ್ಲವನ್ನೂ ಕಳೆದುಕೊಂಡು ತೀರಾ ಕೆಳಹಂತಕ್ಕೆ ಕುಸಿದರೆ ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.

ಜೂನ್ 16, 17, 18ರಂದು ಸಿಇಟಿ ಪರೀಕ್ಷೆ: ಅಶ್ವತ್ಥನಾರಾಯಣ

ಊರು ಬಿಟ್ಟು ಓಡಿ ಹೋಗುವವರು, ಸಂಸಾರದಿಂದ ವಿಚ್ಚೇದಿತರಾಗುವವರು, ಮಾನಸಿಕ ಖಿನ್ನತೆಗೆ ಒಳಗಾಗುವವರು ಸಹ ಸಾಕಷ್ಟು ಜನರಿದ್ದಾರೆ.

ಇದು ಅಧೀಕೃತವಾದರು – ಅನಧೀಕೃತವಾದರು ಪರಿಣಾಮಗಳಲ್ಲಿ ಅಂತಹ ವ್ಯತ್ಯಾಸವೇನು ಆಗುವುದಿಲ್ಲ. ಕಾರಣ ಈ ನೆಲದ ಸಂಸ್ಕೃತಿಗೆ ಈ ಬೆಟ್ಟಿಂಗ್ ಒಗ್ಗುವುದಿಲ್ಲ. ಶ್ರಮ ಸಂಸ್ಕೃತಿ, ಕಾಯಕವೇ ಕೈಲಾಸ, ಉದ್ಯೋಗಂ ಪುರುಷ ಲಕ್ಷಣಂ, ಎಂಬ ಮಾತುಗಳ ಜೊತೆಗೆ ಅನೇಕ ಗಾದೆ ಮಾತುಗಳು ಈ ರೀತಿ ಸುಲಭವಾಗಿ ಬಂದ ಹಣ ಉಳಿಯುವುದಿಲ್ಲ ಅಥವಾ ಅದು ನಮ್ಮನ್ನು ದಾರಿ ತಪ್ಪಿಸುತ್ತದೆ ಎಂದೇ ಅನುಭವದಿಂದ ಸಾಬೀತಾಗಿದೆ.

ಈಗಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿ, ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ, ಜನರ ಹುಚ್ಚು ಮನಸ್ಸಿನ ಹೊಳೆಯಲ್ಲಿ ಬೆಟ್ಟಿಂಗ್ ನಿಲ್ಲಿಸುವುದು ಅಥವಾ ಇಲ್ಲದಂತೆ ಮಾಡುವುದು ಕಷ್ಟ. ಅದಕ್ಕೆ ಬದಲಾಗಿ ನಾವುಗಳೇ ಆ ಚಟಕ್ಕೆ ಬಲಿಯಾಗದಂತೆ ಸ್ವಯಂ ನಿಯಂತ್ರಣ ಹೊಂದಬೇಕು ಮತ್ತು ನಮ್ಮ ಸುತ್ತಮುತ್ತಲಿನ ಪರಿಚಿತರು ಸ್ನೇಹಿತರು ಇದಕ್ಕೆ ಬಲಿಯಾಗದಂತೆ ನಮ್ಮ ಕೈಲಾದಷ್ಟು ಪ್ರಯತ್ನಿಸಬೇಕು.
ಸಂಘ ಸಂಸ್ಥೆಗಳನ್ನು ನಡೆಸುವವರು ತಮ್ಮ ಸದಸ್ಯರುಗಳಿಗೆ ಸಾಧ್ಯವಾದಷ್ಟು ಎಚ್ಚರಿಕೆ ನೀಡಬೇಕು…….

ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಒಂದು ಅತ್ಯುತ್ತಮ ಆಟ ನಿಧಾನವಾಗಿ ಮನರಂಜನೆಯ ಹೆಸರಿನಲ್ಲಿ ದೊಡ್ಡ ಉದ್ಯಮವಾಗಿ ಬೆಳೆದು ಬೆಟ್ಟಿಂಗ್ ದಂಧೆಯಾಗಿ ಮಾರ್ಪಟ್ಟು ಒಂದು ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯ ದುರ್ಗತಿಗೆ ಕಾರಣವಾಗುತ್ತಿರುವುದು ನಮ್ಮ ಸಮಾಜದ ಭವಿಷ್ಯದ ಬಗ್ಗೆ ಚಿಂತಿಸುವಂತೆ ಮಾಡಿದೆ.

ಆಡಳಿತಾತ್ಮಕ ವ್ಯವಸ್ಥೆ ಈ ನಿಟ್ಟಿನಲ್ಲಿ ಯೋಚಿಸುವಂತಾಗಲಿ. ಐಪಿಎಲ್ ಅಥವಾ ಅದರಿಂದಾಗುವ ಬೆಟ್ಟಿಂಗ್ ದುಷ್ಪರಿಣಾಮಗಳನ್ನು ನಿಯಂತ್ರಿಸುವ ಪ್ರಯತ್ನ ಮಾಡಲಿ .

– ವಿವೇಕಾನಂದ ಹೆಚ್.ಕೆ., ಚಿಂತಕರು

9844013068

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap