ರಾಯಚೂರು
ನೂತನವಾಗಿ ಸ್ಥಾಪಿತವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಸಚಿವರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕಿತ್ತು. ಆದರೆ ಇದನ್ನು ಮರೆತ ಬಿಜೆಪಿ ಸರ್ಕಾರ, ತಮ್ಮ ಪಕ್ಷದ ಶಾಸಕರೊಬ್ಬರನ್ನು ಅಧ್ಯಕ್ಷರನ್ನಾಗಿ ಕೂರಿಸಿದೆ.
ಅಭಿವೃದ್ಧಿಗೆ ಮೀಸಲಾದ ಕೆಕೆಆರ್ಡಿಬಿಯ 5 ಕೋಟಿ ರೂಪಾಯಿ ಅನುದಾವನ್ನು ಬಳಸಿ ಕಲ್ಯಾಣ ಕರ್ನಾಟಕ ಉತ್ಸವ ನಡೆಸಲು ಬಿಜೆಪಿ ಮುಂದಾಗಿದೆ. ಇದಕ್ಕೆ ರಾಯಚೂರು ಜಿಲ್ಲೆ ಸೇರಿದಂತೆ ಇತರ ಕಡೆಯಿಂದಲೂ ಅಪಸ್ವರ ಕೇಳಿಬಂದಿದೆ. ಉತ್ಸವದ ಹೆಸರಿನಲ್ಲಿ ಬಿಜೆಪಿ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗಿದೆ ಎನ್ನುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ.
![](https://prajapragathi.com/wp-content/uploads/2023/03/Untitled-2-5.jpg)