ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಜಿಲ್ಲೆಯಲ್ಲಿ ಅಪಸ್ವರ ..!

ರಾಯಚೂರು

    ನೂತನವಾಗಿ ಸ್ಥಾಪಿತವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಸಚಿವರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕಿತ್ತು. ಆದರೆ ಇದನ್ನು ಮರೆತ ಬಿಜೆಪಿ ಸರ್ಕಾರ, ತಮ್ಮ ಪಕ್ಷದ ಶಾಸಕರೊಬ್ಬರನ್ನು ಅಧ್ಯಕ್ಷರನ್ನಾಗಿ ಕೂರಿಸಿದೆ.

    ಅಭಿವೃದ್ಧಿಗೆ ಮೀಸಲಾದ ಕೆಕೆಆರ್‌ಡಿಬಿಯ 5 ಕೋಟಿ ರೂಪಾಯಿ ಅನುದಾವನ್ನು ಬಳಸಿ ಕಲ್ಯಾಣ ಕರ್ನಾಟಕ ಉತ್ಸವ ನಡೆಸಲು ಬಿಜೆಪಿ ಮುಂದಾಗಿದೆ. ಇದಕ್ಕೆ ರಾಯಚೂರು ಜಿಲ್ಲೆ ಸೇರಿದಂತೆ ಇತರ ಕಡೆಯಿಂದಲೂ ಅಪಸ್ವರ ಕೇಳಿಬಂದಿದೆ. ಉತ್ಸವದ ಹೆಸರಿನಲ್ಲಿ ಬಿಜೆಪಿ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗಿದೆ ಎನ್ನುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ.

      2018-19ರಿಂದ ಈಚೆಗೆ ವರ್ಷದಿಂದ ವರ್ಷಕ್ಕೆ ಕಾಮಗಾರಿಗಳು ತ್ವರಿತವಾಗಿ ಮುಗಿಯದೇ ಹಾಗೆಯೇ ಉಳಿದಿವೆ. ಕಾಮಗಾರಿ ಕುಂಟಿತವಾಗಿರುವುದು ಅಂಕಿ ಅಂಶಗಳಿಂದ ಸ್ಪಷ್ಟವಾಗುತ್ತದೆ. ಕೆಕೆಆರ್‌ಡಿಬಿ ಯಿಂದ ಇದುವರೆಗೂ ಕೈಗೊಂಡ 28,929 ಕಾಮಗಾರಿಗಳಲ್ಲಿ 23,428 ಕಾಮಗಾರಿಗಳು ಮಾತ್ರ ಮುಗಿದಿವೆ. 3,580 ಕಾಮಕಾರಿಗಳು ಪ್ರಗತಿ ಹಂತದಲ್ಲಿದ್ದರೆ, 1,921 ಕಾಮಗಾರಿಗಳು ನೆಲ ಬಿಟ್ಟು ಮೇಲೆ ಎದ್ದಿಲ್ಲ ಎಂಬುದು ಎದ್ದು ಕಾಣುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap