ಜಗದೀಶ್‌ ಶೆಟ್ಟರ್‌ ಡೆಡ್‌ ಲೈನ್‌ ಸಮೀಪಿಸುತ್ತಿದೆ : ಹೈಕಮಾಂಡ್ ನಿಲುವೇನು… ?

ಹುಬ್ಬಳ್ಳಿ:

     ಮಾಜಿ ಸಿಎಂ ಜಗದೀಶ್ ಶೆಟ್ಟರ್  ಬಿಜೆಪಿ ಹೈಕಮಾಂಡ್  ವಿರುದ್ಧವೇ ಗರಂ ಆಗಿದ್ದಾರೆ. ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ   ಟಿಕೆಟ್ ಪಡೆಯಲು ಶತಾಯ ಗತಾಯ ಪ್ರಯತ್ನಿಸುತ್ತಿರುವ ಜಗದೀಶ್ ಶೆಟ್ಟರ್, ಇದೀಗ ಬಿಜೆಪಿ ಹೈಕಮಾಂಡ್‌ಗೆ ಡೆಡ್‌ಲೈನ್  ಕೊಟ್ಟಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ಒಳಗೆ ಟಿಕೆಟ್ ಘೋಷಣೆ ಮಾಡಬೇಕು ಅಂತ ತಾಕೀತು ಮಾಡಿದ್ದಾರೆ.

     ನಾನು ಪಾಸಿಟಿವ್ ಆಗಿ ಯೋಚನೆ ಮಾಡ್ತೀನಿ. ಈಗಲೂ ಆಶಾಭಾವ ಹೊಂದಿದ್ದೇನೆ. ಇವತ್ತಿಗೆ ಎರಡು ದಿನ ಆಯ್ತು. ನಾಳೆ ನನಗೆ ಟಿಕೆಟ್  ಘೋಷಣೆ ಆಗದೆ ಹೋದ್ರೆ ನಾನು ಯೋಚನೆ ಮಾಡ್ತೀನಿ ಅಂತ ಎಚ್ಚರಿಸಿದ್ದಾರೆ.

ಬೆಳಗ್ಗೆ 11 ಗಂಟೆವರೆಗೆ ಡೆಡ್‌ಲೈನ್

     ವರಿಷ್ಠರನ್ನು ಭೇಟಿ ಮಾಡಿದ್ದೀನಿ, ಅವರು ಪಾಸಿಟಿವ್ ರೆಸ್ಪಾನ್ಸ್ ಮಾಡಿದ್ದಾರೆ. ನಾಳೆ‌ 11ರ ವರೆಗೂ ನೋಡ್ತೀನಿ. ನಂತರ ಸಭೆ ಮಾಡಿ ತೀರ್ಮಾನ ಮಾಡ್ತೀನಿ ಅಂತ ಹೇಳಿದ್ರು. ಇನ್ನು ಬೇರೆ ಜಿಲ್ಲೆಯಿಂದಲೂ ಜನ ‌ಬರ್ತೀದಾರೆ. ಎಲ್ಲರಿಗೂ ಜಗದೀಶ್ ಶೆಟ್ಟರ್ ಗೆ ಅಪಮಾನ ಆಗಿದೆ ಅಂತೀದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap