ತುಮಕೂರು:
ಆಟೋ ಚಾಲಕನೊಬ್ಬ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ ಆತನ ಸಾವಿಗೆ ಕಾರಣನಾದ ಆಟೋ ಚಾಲಕನಿಗೆ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ಜಗದೀಶ್ ಬಿಸೆರೊಟ್ಟಿ 14 ತಿಂಗಳ ಜೈಲು ವಾಸ ಹಾಗೂ 10 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪಾವಗಡ ಪಟ್ಟಣದ ಅರಸೀಕೆರೆ-ಲಿಂಗದಹಳ್ಳಿ ರಸ್ತೆಯಲ್ಲಿ 2014 ರ ಅಕ್ಟೋಬರ್ 10 ರಂದು ಆಟೋ ಚಾಲಕ ಕುಮಾರಸ್ವಾಮಿ ತನ್ನ ಆಟೋವನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಓಡಿಸಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮಂಜುನಾಥ ಮೃತಪಟ್ಟಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ವಕೀಲ ವಿ.ಮಂಜುನಾಥ್ ವಾದ ಮಂಡಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
