ಬೆಂಗಳೂರು
ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಮಳೆ ಸುರಿದಿದೆ. ನಂತರ ಜಿಟಿಜಿಟಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್ ಮಾರುಕಟ್ಟೆ ಸೇರಿದಂತೆ ಅನೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ನಗರದ ಓಕಳೀಪುರ ಅಂಡರ್ ಪಾಸ್ನಲ್ಲಿ ನೀರು ತುಂಬಿದ್ದು, ಕೆರೆಯಂತಾಗಿದೆ. ಅಂಡರ್ ಪಾಸ್ ಪೂರ್ತಿ ಮಳೆ ನೀರು ತುಂಬಿದ್ದು, ವಾಹನ ಸವಾರರು ಚಾಲನೆಗೆ ಹರಸಾಹಸಪಡುವಂತಾಗಿದೆ.
ಅಂಡರ್ ಪಾಸ್ನಲ್ಲಿ ನೀರು ನಿಂತಿರುವ ಕಾರಣ ವಾಹನಗಳು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪರದಾಟಪಡುವಂತಾಯಿತು. ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.
