ಪತ್ನಿಗಾಗಿ ಮಾವಿನ ಮರವೇರಿದ ಜನಾರ್ಧನ ರೆಡ್ಡಿ!!

ಬೆಂಗಳೂರು :

     ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಪತ್ನಿಗಾಗಿ ಮರವೇರಿ ಮಾವಿನ ಕಾಯಿ ಕಿತ್ತು ಕೊಟ್ಟಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

       ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿದ್ದ ಮಾವಿನ ಮರ ಹತ್ತಿ ಪತ್ನಿಗಾಗಿ ಮಾವಿನ ಕಾಯಿ ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ.

ವಿಡಿಯೋ- ಪತ್ನಿಗಾಗಿ ಮಾವಿನ ಮರವೇರಿದ್ರು ಜನಾರ್ದನ ರೆಡ್ಡಿ!

      ಜನರ್ದಾನ ರೆಡ್ಡಿ ಫೇಸ್ ಬುಕ್ ನಲ್ಲಿ, ನನೆಪಿಗೆ ಬಂದ ಆ ಬಾಲ್ಯದ ದಿನಗಳು..

     ನಿನ್ನೆ ಕುಟುಂಬದ ಖಾಸಗಿ ಕಾರ್ಯಕ್ರಮಯೊಂದರಲ್ಲಿ ಭಾಗವಹಿಸಲು ಆಂಧ್ರಪ್ರದೇಶದಲ್ಲಿರುವ ನಮ್ಮ ಮಾವನವರ ಊರಿಗೆ ತೆರಳಿದ್ದೆ. ಅದೇ ಸಮಯದಲ್ಲಿ ನಮ್ಮ ಮಾವನವರ ತೋಟಕ್ಕೆ ನಮ್ಮ ಧರ್ಮ ಪತ್ನಿ ಲಕ್ಷ್ಮೀ ಅರುಣಾ ಜೊತೆಗೆ ಭೇಟಿ ಕೊಟ್ಟಿದ್ದೆ.

      ತೋಟದಲ್ಲಿ ಇಪ್ಪತ್ತ್ ಏಳು ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು. ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತಿ ನನ್ನ ಶ್ರೀಮತಿಗೆ ನೀಡಿದೆ .  ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು .

  

Recent Articles

spot_img

Related Stories

Share via
Copy link