ಮಾಗಡಿ
ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಹೊರಾತಾಗಿಯೂ ಜೆಡಿಎಸ್ಗೆ ಬಿಗ್ ಶಾಕ್ ಎದುರಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿಯವರ ತವರು ಕ್ಷೇತ್ರದಲ್ಲೇ ಅಧಿಕಾರಿ ಹಿಡಿಯುವಲ್ಲಿ ಜೆಡಿಎಸ್ ವಿಫಲವಾಗಿದೆ.
ಇಂದು ಮಾಗಡಿ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು ಈ ಚುನಾವಣೆಯಲ್ಲಿ ಸ್ಪಷ್ಟ ಬಹುಮತವಿದ್ದರು ಅಧಿಕಾರ ಹಿಡಿಯುವಲ್ಲಿ ಜೆಡಿಎಸ್ ವಿಫಲವಾಗಿದೆ. ಇನ್ನೂ ಬಹುಮಮತ ಇಲ್ಲದಿದ್ದರೂ ಜೆಡಿಎಸ್ನ ಮೂವರು ಸದಸ್ಯರು ತಟಸ್ಥರಾದ ಹಿನ್ನೆಲೆ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆಗೆ ಏರಿತು.
ಮಾಗಡಿ ಪುರಸಭೆ ಒಟ್ಟು 23 ಸದಸ್ಯರ ಸಂಖ್ಯಾಬಲ ಹೊಂದಿದೆ. ಇದರಲ್ಲಿ ಜೆಡಿಎಸ್ 12, ಬಿಜೆಪಿ 1 ಮತ್ತು ಕಾಂಗ್ರೆಸ್ ಪಕ್ಷ 10 ಸದಸ್ಯರ ಸಂಖ್ಯಾಬಲ ಹೊಂದಿದೆ. ಸ್ಪಷ್ಟ ಬಹುಮತದ ಜೊತೆಗೆ ಓರ್ವ ಬಿಜೆಪಿ ಸದಸ್ಯರ ಬೆಂಬಲದೊಂದಿದೆ ಜೆಡಿಎಸ್ ಅಧಿಕಾರ ಹಿಡಿಯುವುದು ಖಚಿತ ಎಂದೇ ಹೇಳಲಾಗಿತ್ತು. ಆದ್ರೆ ಕೊನೇ ಸ್ವಪಕ್ಷದ ಮೂವರು ಸದಸ್ಯರು ಜೆಡಿಎಸ್ಗೆ ಕೈಕೊಟ್ಟ ಹಿನ್ನೆಲೆ ಜೆಡಿಎಸ್ ತೀವ್ರ ಮುಖಭಂಗ ಅನುಭವಿಸಿತು. ಇನ್ನೂ 10 ಸದಸ್ಯರ ಸಂಖ್ಯಾಬಲ ಹೊಂದಿದ್ದ ಕಾಂಗ್ರೆಸ್ ಮೂವರು ಜೆಡಿಎಸ್ ಸದಸ್ಯರನ್ನು ಹೈಜಾಕ್ ಮಾಡಿದ್ದು, ಆ ಮೂವರು ಸದಸ್ಯರತ ತಟಸ್ಥರಾದ ಹಿನ್ನೆಲೆ ಕಾಂಗ್ರೆಸ್ ಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಒಲಿದಿದೆ.
ಇನ್ನೂ ಕಳೆದ ಮೂರು ದಿನಗಳಿಂದ ಜೆಡಿಎಸ್ನ ಮೂವರು ಸದಸ್ಯರು ಸಂಪರ್ಕಕ್ಕೆ ಸಿಗದ ಹಿನ್ನೆಲೆ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ನ ರಮ್ಯಾ ನರಸಿಂಹಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ರಿಯಾಜ್ ಅಹಮದ್ ಆಯ್ಕೆಯಾಗಿದ್ದಾರೆ. ಆ ಮೂಲಕ ಶಾಸಕ ಹೆಚ್.ಸಿ.ಬಾಲಕೃಷ್ಣ ನೇತೃತ್ವದಲ್ಲಿ ಆಪರೇಷನ್ ಸಕ್ಸಸ್ ಆಗಿದೆ.
ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಬಳಿಕ ಪ್ರತಿಕ್ರಿಯೆ ನೀಡಿದ ಶಾಸಕ ಹೆಚ್ಸಿ ಬಾಲಕೃಷ್ಣ, ನಾನು ಯಾವುದೇ ಆಪರೇಷನ್ ಮಾಡಿಲ್ಲ, ಜೆಡಿಎಸ್ ಸದಸ್ಯರು ತಟಸ್ಥರಾದರೂ, ಅದು ನಮಗೆ ಗೊತ್ತಿಲ್ಲ. ಅವರು ಅರ್ಧದಾರಿಯಲ್ಲಿ ನಿಂತಿದ್ದರು. ನಾನು ಅವರನ್ನು ಕಾರಿನಲ್ಲಿ ಕರೆದುಕೊಂಡು ಬಂದೆ ಅಷ್ಟೇ. ಅವರು ಗೊಂದಲ ಮಾಡಿಕೊಂಡು ಬಂದಿದ್ದಾರೆ. ನಮ್ಮ ಸಂಖ್ಯಾ ಬಲದಿಂದ ನಾವು ಗೆದ್ದಿದ್ದೇವೆ ಅಷ್ಟೇ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.
