ನವದೆಹಲಿ:
ದೇಶದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರು ಸತತ 9 ಗಂಟೆಗಳ ವಿಚಾರಣೆ ನಂತರ ಇಡಿ ಕಚೇರಿಯಿಂದ ತೆರಳಿದ್ದಾರೆ.
ಕವಿತಾ ಅವರು ಇಂದು ಬೆಳಗ್ಗೆ 11.15ರ ಸುಮಾರಿಗೆ ನಿರ್ದೇಶನಾಲಯದ ಪ್ರಧಾನ ಕಛೇರಿ ಆಗಮಿಸಿದ್ದರು. ಎಎಪಿ ಸರ್ಕಾರಕ್ಕೆ 100 ಕೋಟಿ ರೂಪಾಯಿ ಲಂಚ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ, ಇಡಿ ವಶದಲ್ಲಿರುವ ಸೌತ್ ಗ್ರೂಪ್ ನ ಅರುಣ್ ರಾಮಚಂದ್ರ ಪಿಳ್ಳೆ ಅವರ ಸಮ್ಮುಖದಲ್ಲೇ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
