ಕಾಲ್ತುಳಿತ ಪ್ರಕರಣ: ಇಂದು ಹೈಕೋರ್ಟ್‌ನಲ್ಲಿ ಆರೋಪಿ ನಿಖಿಲ್‌ ಅರ್ಜಿ ವಿಚಾರಣೆ

ಬೆಂಗಳೂರು:

     ಆರ್‌ಸಿಬಿ ಸಂಭ್ರಮಾಚರಣೆಯ ವೇಳೆಯಲ್ಲಿ ಕಾಲ್ತುಳಿತದಿಂದ  11 ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ನಿಖಿಲ್ ಸೋಸಲೆ  ಎಂಬವರನ್ನು ಬಂಧಿಸಲಾಗಿತ್ತು. ಈ ಬಂಧನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ , ಅರ್ಜಿಯ ವಿಚಾರಣೆಯನ್ನು ಇಂದು ಮುಂದುವರಿಸಲಿದೆ. ಸಿಸಿಬಿ ಅಕ್ರಮವಾಗಿ ತಮ್ಮನ್ನು ಬಂಧಿಸಿದೆ ಎಂಬುದಾಗಿ ಆರ್ ಸಿ ಬಿ ಮ್ಯಾನೇಜರ್ ನಿಖಿಲ್ ಸೋಸಲೆ ವಾದಿಸಿದ್ದು, ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

     ಕಳೆದ ಎರಡು ವರ್ಷಗಳಿಂದ RCBಯ ಮಾರ್ಕೆಟಿಂಗ್ ಮತ್ತು ಆದಾಯ ವಿಭಾಗದ ಮುಖ್ಯಸ್ಥರಾಗಿ ನಿಖಿಲ್ ಸೋಸಲೆ ಅವರು ಕೆಲಸ ಮಾಡುತ್ತಿದ್ದಾರೆ. RCB ತಂಡದ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್‌ನ ಮಾತೃ ಕಂಪನಿಯಾದ ಡಯಾಜಿಯೊ ಇಂಡಿಯಾದ ಉದ್ಯೋಗಿ ಈ ನಿಖಿಲ್ ಸೋಸಲೆ.

    ಹೈಕೋರ್ಟ್ ವಿಚಾರಣೆ ನಡೆಸಿದ ಸಂದರ್ಭದಲ್ಲಿ ನಿಖಿಲ್ ಸೋಸಲೆ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದಿಸಿದರು. ರಾಜ್ಯ ಸರ್ಕಾರ ಸಿಸಿಬಿಯಿಂದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ತಮ್ಮ ಕಕ್ಷಿದಾರರನ್ನು ಬಂಧಿಸಲಾಗಿದೆ. ಇದು ಕಾನೂನು ಉಲ್ಲಂಘಿಸಿ ಮಾಡಿದ ಬಂಧನವಾಗಿದೆ. ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು ನೀಡುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು.

   ಈ ವೇಳೆ ಹೈಕೋರ್ಟ್ ನಿಖಿಲ್ ಸೋಸಲೆಯನ್ನು ಬಂಧಿಸುವಂತ ಅಧಿಕಾರ ಸಿಸಿಬಿಗೆ ಇತ್ತೆ ಎಂಬುದಾಗಿ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಎಜೆ, ದೇಶ ತೊರೆಯುತ್ತಿದ್ದಾಗ ಬಂಧಿಸಲಾಗಿದೆ. ಇದಕ್ಕೆ ಸೂಕ್ತ ಲಿಖಿತ ಉತ್ತರ ನೀಡಲಾಗುತ್ತದೆ. ಹೀಗಾಗಿ ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು ನೀಡದಂತೆ ಮನವಿ ಮಾಡಿದರು.

   ಇದೇ ಸಂದರ್ಭದಲ್ಲಿ ಆರ್ ಸಿ ಬಿ ಪರ ಹಿರಿಯ ವಕೀಲ ವಿ.ನಾಗೇಶ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ವಿಜಯೋತ್ಸವ ಸಂಭ್ರಮಾಚರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಆಹ್ವಾನಿಸಲಾಗಿತ್ತು ಎಂಬುದಾಗಿ ಹೈಕೋರ್ಟ್ ನ್ಯಾಯಪೀಠದ ಗಮನಕ್ಕೆ ತಂದರು. ನಿಖಿಲ್ ಸೋಸಲೆ ಪರ ವಕೀಲರು, ಆರ್ ಸಿ ಬಿ ಪರ ವಕೀಲರು ಹಾಗೂ ಸರ್ಕಾರದ ಪರ ಎಜೆ ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಪೀಠ ಬಂಧನಕ್ಕೊಳಗಾದವರ ಪ್ರಕರಣ ರದ್ದು, ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್ 10ಕ್ಕೆ ಮುಂದೂಡಿಕೆ ಮಾಡಿದೆ.

Recent Articles

spot_img

Related Stories

Share via
Copy link