ಉ.ಪ್ರದೇಶ : ಕಂಗನಾಗೆ ಕೋರ್ಟ್‌ ಸಮನ್ಸ್….!

ಲಖನೌ: 

   2020-21ರ ರೈತರ ಪ್ರತಿಭಟನೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ-ಶಾಸಕರ ನ್ಯಾಯಾಲಯ ಶುಕ್ರವಾರ ಬಾಲಿವುಡ್ ನಟಿಗೆ ಸಮನ್ಸ್ ಜಾರಿ ಮಾಡಿದೆ.

   ಅಕ್ಟೋಬರ್ 25 ರಂದು ವಿಚಾರಣೆಗೆ ಹಾಜರಾಗುವಂತೆ ಕಂಗನಾ ಅವರಿಗೆ ಕೋರ್ಟ್ ಸಮನ್ಸ್ ನೀಡಿದೆ ಎಂದು ಫಿರ್ಯಾದಿದಾರರ ಪರ ವಕೀಲರಾದ ಸಂಜಯ್ ಶರ್ಮಾ ಅವರು ತಿಳಿಸಿದ್ದಾರೆ.ಕೃಷಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಯಲ್ಲಿ ‘ಹಿಂಸಾಚಾರ’, ‘ಅತ್ಯಾಚಾರ’ ಮತ್ತು ‘ಕೊಲೆಗಳು’ ನಡೆಯುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಂಗನಾ ವಿರುದ್ಧ ಭಾರತೀಯ ಕಿಸಾನ್ ಯೂನಿಯನ್(ಕಿಸಾನ್ ಶಕ್ತಿ) ಪದಾಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ.

   ಬಿಕೆಯು (ಕಿಸಾನ್ ಶಕ್ತಿ) ಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಗಜೇಂದ್ರ ಶರ್ಮಾ ಮಾತನಾಡಿ, “ಲೋಕಸಭಾ ಸಂಸದೆ ಕಂಗನಾ ರಣಾವತ್ ಅವರು ರೈತರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ನಾನು ದೂರು ನೀಡಿದ್ದೇನೆ. ಅವರು ಸಂಸದರಾಗುವ ಮೊದಲೇ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಘಾಜಿಪುರ ಗಡಿಯಲ್ಲಿ(ದೆಹಲಿಯ) ಪ್ರತಿಭಟನೆಯಲ್ಲಿ ತೊಡಗಿದ್ದ ರೈತರನ್ನು ಖಲಿಸ್ತಾನಿ ಮತ್ತು ಪಾಕಿಸ್ತಾನಿ ಎಂದು ಕರೆದರು ಮತ್ತು ಈಗ ಸಂಸದೆಯಾದ ನಂತರ ರೈತರನ್ನು ಅತ್ಯಾಚಾರಿಗಳು ಮತ್ತು ಕೊಲೆಗಾರರು ಎಂದು ಕರೆದಿದ್ದಾರೆ ಎಂದರು.

Recent Articles

spot_img

Related Stories

Share via
Copy link
Powered by Social Snap