ಉತ್ತರ ಪ್ರದೇಶ :
ಆಶ್ರಯ ಮನೆಛಾವಣಿ ಕುಸಿದು 15 ಮಂದಿ ಮೃತಪಟ್ಟಿರುವ ಘಟನೆ ಮುರಾದ್ ನಗರದ ಸ್ಮಶಾನದಲ್ಲಿ ಭಾನುವಾರ ನಡೆದಿದೆ.
ಉಖಲಾರ್ಸಿ ಗ್ರಾಮದ ವ್ಯಕ್ತಿಯೊಬ್ಬ ಮೃತನಾಗಿದ್ದ. ಆತನ ಅಂತ್ಯಸಂಸ್ಕಾರ ನಡೆಸಲೆಂದು ಸಂಬಂಧಿಕರು ಭಾನುವಾರ ಬೆಳಗ್ಗೆ ಶವಾಗಾರಕ್ಕೆ ಬಂದಿದ್ದಾರೆ. ಅಂತ್ಯಕ್ರಿಯೆ ನಡೆಸುವ ವೇಳೆಯಲ್ಲಿ ಜೋರಾಗಿ ಮಳೆ ಸುರಿದಿದೆ. ಆ ಹಿನ್ನೆಲೆಯಲ್ಲಿ ಎಲ್ಲರೂ ಅಲ್ಲಿನ ಛಾವಣಿಯ ಒಳಗೆ ಸೇರಿಕೊಂಡಿದ್ದಾರೆ. ಈ ವೇಳೆ ಛಾವಣಿ ಕುಸಿದುಬಿದ್ದಿದೆ.
ಛಾವಣಿಯ ಅಡಿ ಕನಿಷ್ಠ 24 ಮಂದಿ ಇದ್ದರು ಎನ್ನಲಾಗಿದೆ. ಈವರೆಗೆ 18 ಮಂದಿಯ ಮೃತ ದೇಹವನ್ನು ಹೊರತೆಗೆಯಲಾಗಿದೆ. ಇದೀಗ ಅವಶೇಷಗಳಡಿ ಸಿಲುಕಿದ್ದವರನ್ನು ಪತ್ತೆ ಹಚ್ಚುವ ಹಾಗೂ ರಕ್ಷಿಸುವಂತ ಕಾರ್ಯದಲ್ಲಿ ರಕ್ಷಣಾ ಸಿಬ್ಬಂದಿ ಹರಸಾಹಸ ನಡೆಸಿದ್ದಾರೆ ಎಂದು ಘಾಜಿಯಾಬಾದ್ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡಿರುವವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಬಗ್ಗೆ ಸಂತಾಪ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
