ಪುಲ್ವಾಮ ದಾಳಿ : ಕಾಶ್ಮೀರಿ ವ್ಯಾಪಾರಿಗಳ ಮೇಲೆ ದೊಣ್ಣೆಯಿಂದ ಹಲ್ಲೆ!!

ಲಕ್ನೋ:

      ಕಾಶ್ಮೀರ ಮೂಲದ ಇಬ್ಬರು ವ್ಯಾಪಾರಿಗಳಿಗೆ ಕೆಲ ಸಾಮಾಜಿಕ ಕಾರ್ಯಕರ್ತರು ನಡುರಸ್ತೆಯಲ್ಲೇ ಥಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

      2 ಕಾಶ್ಮೀರಿ ವ್ಯಾಪಾರಿಗಳಿಗೆ ದೊಣ್ಣೆ ಹಿಡಿದು ಒಬ್ಬ ವ್ಯಕ್ತಿ ಥಳಿಸುತ್ತಿರುವ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ. ಕೇಸರಿ ಬಣ್ಣದ ಬಟ್ಟೆ ಧರಿಸಿದ್ದ ಗುಂಪೊಂದು ವ್ಯಾಪಾರಿಗಳಿಗೆ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಯಾಕೆ ನಮ್ಮನ್ನು ಹೊಡೆಯುತ್ತಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನೀವು ಕಾಶ್ಮೀರದವರು ಅದಕ್ಕೆ ನಿಮ್ಮನ್ನು ಹೊಡೆಯುತ್ತಿದ್ದೇವೆ ಅಂತ ಆರೋಪಿಗಳು ಉತ್ತರಿಸಿದ್ದಾರೆ. ಈ ವಿಡಿಯೋ ಆಧಾರದ ಮೇಲೆ ಈಗಾಗಲೇ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

      ಬುಧವಾರ ಸಂಜೆ ಸುಮಾರು 5 ಗಂಟೆ ಹೊತ್ತಿಗೆ ಲಕ್ನೋನ ಡಾಲಿಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ದೃಶ್ಯವನ್ನು ಕೆಲವರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

      ಪುಲ್ವಾಮ ದಾಳಿ ನಡೆದ ನಂತರ ದೇಶದ ಇತರೆ ಭಾಗಗಳಲ್ಲಿ ವಾಸವಾಗಿರುವ ಕಾಶ್ಮೀರಿಗಳ ಮೇಲೆ ಹಲ್ಲೆ, ಬಹಿಷ್ಕಾರ ಹಾಕಿದಂತ ಹಲವು ಘಟನೆಗಳು ದೇಶದ ಹಲವೆಡೆ ನಡೆದಿವೆ.

      ಹಲ್ಲೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಕಾಶ್ಮೀರಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹತ್ತು ರಾಜ್ಯಗಳಿಗೆ ಸುಪ್ರೀಂಕೋರ್ಟ್​ ಕಟ್ಟುನಿಟ್ಟಿನ ಆದೇಶ ನೀಡಿತ್ತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

      

Recent Articles

spot_img

Related Stories

Share via
Copy link