ಸಿಡಿಲಿಗೆ ತಾಯಿ-ಮಗಳು ಸೇರಿ ಮೂವರು ಬಲಿ

ದಾವಣಗೆರೆ:

ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ತಾಯಿ-ಮಗಳು ಸೇರಿ ಮೂವರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಜಿಲ್ಲೆಯಲ್ಲಿ ಹರಪನಹಳ್ಳಿ ಹಾಗೂ ಜಗಳೂರು ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡದಲ್ಲಿ ತಾಯಿ ಮಗಳು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ತಾಯಿ ಸವಿತಾ ಬಾಯಿ (29) ಮತ್ತು ಮಗಳು ಪಲ್ಲವಿ (11) ಸಿಡಿಲಿಗೆ ಬಲಿಯಾಗಿರುವ ದುರ್ದೈವಿಗಳಾಗಿದ್ದಾರೆ.

ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಘಟನೆ ಸಂಭವಿಸಿದೆ.ಈ ಕುರಿತು ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗಳೂರು:  ಸಿಡಿಲಿಗೆ ಜಗಳೂರು ತಾಲೂಕಿನ ಶಾಂತಮ್ಮ ಎಂಬುವರು ಸಹ ಬಲಿಯಾಗಿದ್ದಾರೆ

Recent Articles

spot_img

Related Stories

Share via
Copy link
Powered by Social Snap