ರಾಯಗಢ :
ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುಂಬೈ – ಪುಣೆ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ 1: 30ರ ಸುಮಾರಿನಲ್ಲಿ ಪುಣೆ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕಾರು ಟ್ಯಾಂಕರ್ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ 6 ಜನರಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪನ್ವೆಲ್ನ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ
ಪ್ರಯಾಣಿಕರು ಸಂಬಂಧಿಕರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಸತಾರಾದಿಂದ ಹಿಂದಿರುಗುತ್ತಿದ್ದರು. ಎಂದು ತಿಳಿದುಬಂದಿದೆ.
ಮೃತರಲ್ಲಿ 3 ಮಹಿಳೆಯರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/Untitled-2-8.gif)