ಬೆಳ್ಳಂಬೆಳಗ್ಗೆ ಸರಣಿ ಅಪಘಾತ : ಒಂದೇ ಕುಟುಂಬದ ಐವರ ಸಾವು!!

ಮುಂಬೈ:  

      ಭೀಕರ ಸರಣಿ ಅಪಘಾತ ಸಂಭವಿಸಿ 5 ಮಂದಿ ಸಾವನ್ನಪ್ಪಿರುವ ದುರ್ಘಟನೆ ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಖೋಪಲಿ ಸಮೀಪದ ಮುಂಬೈ-ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.

      ನವಿ ಮುಂಬೈ ಮುನಿಸಿಪಲ್ ಕಾಪೆರ್ರೇಷನ್ (ಎನ್‍ಎಂಎಂಸಿ)ಯ ಪಶುವೈದ್ಯರು ಸೇರಿದಂತೆ ಅವರ ಕುಟುಂಬದ ಮೂವರು ಒಂದು ಕಾರಿನಲ್ಲಿ ತೆರಳುತ್ತಿದ್ದರು. ಖಾಲಾಪುರ ಟೋಲ್ ಪ್ಲಾಜಾ ಕ್ಯೂನಲ್ಲಿ ನಿಂತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಒಂದು ಕಾರಿನಲ್ಲಿ ಪಶುವೈದ್ಯ ಡಾ. ವೈಭವ್ ಜಜಾಜರೆ, ಅವರ ತಾಯಿ, ಪತ್ನಿ ಹಾಗೂ ಮಗಳು ಇದ್ದರೆಂದು ತಿಳಿದುಬಂದಿದೆ.

      ಲಾರಿ ಚಾಲಕ ನಿಯಂತ್ರಣ ತಪ್ಪಿ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ವಿವರಣೆ ನೀಡಿದ್ದಾನೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

     ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ಮಂಜಿನ ವಾತಾವರಣ ಇದ್ದಿದ್ದರಿಂದ ವಾಹನಗಳು ಪರಸ್ಪರ ಡಿಕ್ಕಿಯಾಗಿವೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap