ಗಡಿಯಲ್ಲಿ ಗುಂಡಿನ ಕಾಳಗ : ಐವರು ಯೋಧರು ಹುತಾತ್ಮ!!

ಶ್ರೀನಗರ :

     ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ಮೂಲಕ ನುಸಳಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಪಾಕಿಸ್ತಾನಿ ಬೆಂಬಲಿತ ಉಗ್ರಗಾಮಿಗಳು ನಡೆಸಿದ ಯತ್ನವೊಂದನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಗುಂಡಿನ ಚಕಮಕಿಯಲ್ಲಿ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದಾರೆ

     ಉತ್ತರ ಕಾಶ್ಮೀರದ ಕೆರನ್ ವಲಯದ ಗಡಿ ಪ್ರದೇಶದಲ್ಲಿ ಉಗ್ರಗಾಮಿಗಳ ನುಸುಳುವಿಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಟ್ಟೆಚ್ಚರ ವಹಿಸಿರುವ ಭಾರತೀಯ ಭದ್ರತಾಪಡೆಗಳು ಎಲ್‍ಒಸಿ ಬಳಿ  ಮೂವರು ಸೇನಾ ಸಿಬ್ಬಂದಿ ಉಗ್ರರ ಗುಂಡುಗಳಿಗೆ ಹುತಾತ್ಮರಾಗಿದ್ದಾರೆ. ಇದಾದ ನಂತರ ನಡೆದ ಕಾರ್ಯಾಚರಣೆಯಲ್ಲಿ ಮತ್ ತಿಬ್ಬರು ಹುತಾತ್ಮರಾಗಿದ್ದಾರೆ.

Ministry of Defence: No term like 'martyr' or 'shaheed' in our ...

      ಇದರ ಜತೆಗೆ ನಮ್ಮ ಸೇನೆ ಕೂಡ ಸಮಾನ ಸಂಖ್ಯೆಯಲ್ಲಿ ಉಗ್ರರನ್ನು ಸದೆಬಡಿದಿದೆ. ಹತರಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.

      ಕಾಶ್ಮೀರದ ಗಡಿ ಭಾಗದಲ್ಲಿ ಭಾರೀ ಹಿಮಪಾತ ಮತ್ತು ಪ್ರತಿಕೂಲ ಹವಾಮಾನದ ಪ್ರಯೋಜನ ಪಡೆದು ಒಳ ನುಸುಳಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಯತ್ನಿಸಿದ್ದ ಸಂಗತಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link