ಕಾಶ್ಮೀರದಲ್ಲಿ ಉಗ್ರರಿಂದ 6 ಮಂದಿ ಕಾರ್ಮಿಕರ ಹತ್ಯೆ!!

ಶ್ರೀನಗರ:

      ಯುರೋಪ್‌ ಸಂಸದರ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿಯೇ ಉಗ್ರರು ಅಟ್ಟಹಾಸ ಮೆರೆದಿದ್ದು, 6 ಮಂದಿಯನ್ನು ಹತ್ಯೆ ಮಾಡಿದ್ದಾರೆ.

      ಮೃತರಾದ ಐವರ ಪೈಕಿ ಮೂವರನ್ನು ಶೇಖ್ ಕಮರುದ್ದೀನ್, ಶೇಖ್ ಮೊಹಮದ್ ರಫೀಕ್ ಮತ್ತು ಶೇಖ್ ಮುರ್ನ್ಸ ಸುಲಿನ್ ಎಂದು ಗುರುತಿಸಲಾಗಿದೆ.

      ಸ್ಥಳಕ್ಕೆ ಧಾವಿಸಿದ ಪೊಲೀಸರು, ದಾಳಿ‌ ನಡೆದ ಸ್ಥಳದಲ್ಲಿ ಹಲವು ಮೃತದೇಹಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ. ಮೃತರು ಕಾಶ್ಮೀರೇತರರಾಗಿದ್ದು, ಕೆಲಸಕ್ಕಾಗಿ ಕಣಿವೆಗೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

      ಕಳೆದ 10 ದಿನಗಳಲ್ಲಿ ಕಾಶ್ಮೀರೇತರರ ಮೇಲೆ ಉಗ್ರರು ದಾಳಿ ನಡೆಸಿದ ಎರಡನೇ ಪ್ರಕರಣ ಇದಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap