ನವದೆಹಲಿ :
ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿದ ತೃಣಮೂಲ ಕಾಂಗ್ರೆಸ್ ಪಕ್ಷದ ಆರು ಸಂಸದರನ್ನು ಅಮಾನತುಗೊಳಿಸಿ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಕುರ್ಚಿಗಳನ್ನು ಎಳೆದಾಡಿ, ನಾಮಫಲಕಗಳನ್ನು ಪ್ರದರ್ಶಿಸುತ್ತಾ ಗದ್ದಲ ಸೃಷ್ಟಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಡೋಲಾ ಸೇನ್, ಮೊಹಮ್ಮದ್ ನಬೀಮುಲ್, ಅಬಿರ್ ರಂಜನ್ ಬಿಸ್ವಾಸ್, ಶಾಂತ ಛೆತ್ರಿ, ಅರ್ಪಿತಾ ಘೋಷ್, ಮೌಸಮ್ ನೂರ್ ಎಂಬ ಆರು ಸಂಸದರನ್ನು ಅಮಾನತುಗೊಳಿಸಲಾಗಿದೆ.
ರಾಜ್ಯಸಭೆ ಕಲಾಪದ ಸಂದರ್ಭದಲ್ಲಿ ಆರು ಮಂದಿ ಟಿಎಂಸಿ ಸಂಸದರ ನಡವಳಿಕೆ ಸರಿಯಾಗಿರಲಿಲ್ಲ. ಆದ್ದರಿಂದ ಅವರನ್ನು ಗೌರವಾನ್ವಿತ ಅಧ್ಯಕ್ಷರು ನಿಯಮ 255ರ ಅಡಿಯಲ್ಲಿ ಕೌನ್ಸಿಲ್ನಿಂದ ತಕ್ಷಣವೇ ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ” ಎಂದು ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ